ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಜೈಲು ಸಿಬ್ಬಂದಿಗೆ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ.
ಇಷ್ಟು ದಿನ ಟಿವಿ ಸಹವಾಸವೇ ಬೇಡ ಎಂದು ಕೈ ಮುಗಿಯುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಬಳ್ಳಾರಿ ಜೈಲಿನಲ್ಲಿ ಟಿವಿ ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ.
ಚಾರ್ಜ್ಶೀಟ್ ಸಲ್ಲಿಕೆ ಬಗ್ಗೆ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ದರ್ಶನ್ ಟಿವಿ ಮೊರೆ ಹೋಗಿದ್ದಾರೆ ಎನ್ನಲಾಗಿದ್ದು, ಜೈಲು ಸಿಬ್ಬಂದಿ ಬಳಿ ಮನವಿ ಮಾಡಿಕೊಂಡಿದ್ದಾರೆ.
ಇಂದು ಬೆಳಿಗ್ಗೆ ದರ್ಶನ್ ಇರಿಸಿರುವ ಹೈ ಸೆಕ್ಯೂರಿಟಿ ಸೆಲ್ ಬಳಿ ಸಿಬ್ಬಂದಿ ತಿಂಡಿ ಕೊಡಲು ಹೋಗಿದ್ದಾಗ ಚಾರ್ಜ್ಶೀಟ್ ವಿಚಾರದ ಬಗ್ಗೆ ಪದೇ ಪದೇ ಕೇಳುತ್ತಿದ್ದರು ಎನ್ನಲಾಗಿದೆ.
ಚಾರ್ಜ್ಶೀಟ್ ಬಗ್ಗೆ ಏನೂ ಮಾಹಿತಿ ಸಿಗದೇ ಇದ್ದಾಗ ಬೇಸರಗೊಂಡ ದರ್ಶನ್, ಜೈಲು ಸಿಬ್ಬಂದಿ ಮಧ್ಯಾಹ್ನದ ಊಟ ಕೊಡಲು ಹೋದಾಗ ಟಿವಿ ಬಗ್ಗೆ ವಿಚಾರಿಸಿದ್ದಾರೆ.
ಟಿವಿ ಬೇಕು ಎನ್ನುವುದಾದರೆ ಮೇಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಎಂದು ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ ಟಿವಿ ಬೇಕು ಎಂದು ದರ್ಶನ್ ಅವರು ಮೇಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…