ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಅವರು ಮನೆಯೂಟ, ಹಾಸಿಗೆ ಕೇಳಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆಯನ್ನು ಇದೇ ಜು.29ಕ್ಕೆ ಮುಂದೂಡಿ ಕೋರ್ಟ್ ಆದೇಶಿಸಿದೆ.
ಮನೆಯಿಂದ ಹಾಸಿಗೆ, ಊಟ, ಪುಸ್ತಕ ಸೇರಿದಂತೆ ಇತರೆ ಅಗತ್ಯ ವಸ್ತುಗಳು ಬೇಕೆಂದು ನ್ಯಾಯಾಲಯಕ್ಕೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ವಿಚಾರಣೆ ನಡೆಸಿದ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ಪೀಠ, ಈ ಪ್ರಕರಣದಲ್ಲಿ ಮಧ್ಯಂತರ ತೀರ್ಪು ನೀಡಲು ನ್ಯಾಯಾಲಯ ಬಯಸುವುದಿಲ್ಲ. ಈ ಸಂಬಂಧ ಮ್ಯಾಜಿಸ್ಟ್ರೇಜ್ ಕೋರ್ಟ್ ಮುಂದೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಹೇಳಿದೆ. ಹಾಗೂ ರಿಟ್ ಅರ್ಜಿ ಕುರಿತಂತೆ ಜು.29ಕ್ಕೆ ವಿಚಾರಣೆ ಮಾಡುವುದಾಗಿ ಹೇಳಿದೆ.
ಜತೆಗೆ ಈ ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಜು.26 ಒಳಗಾಗಿ ವಿಚಾರಣೆ ಆಗಬೇಕು ಹಾಗೂ ತೀರ್ಪು ಪ್ರಕಟಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…