ಮನರಂಜನೆ

ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ: ಫ್ಯಾನ್ಸ್‌ಗೆ ನಟ ದರ್ಶನ್‌ ಮನವಿ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್‌ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್‌ಗೆ ದರ್ಶನ್‌ ಮನವಿಯೊಂದನ್ನು ಮಾಡಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.

ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್‌ ಹೇಳೋದಾ ಎಂದಿರುವ ನಟ ದರ್ಶನ್‌ ಅವರು, ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆಬ್ರವರಿ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್‌ ಹೇಳೋಣ ಎಂಬ ಆಸೆಯಿತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ದರ್ಶನ್‌ ಮನವಿ ಮಾಡಿದ್ದಾರೆ.

ಇದೇ ವೇಳೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವ ಬಗ್ಗೆ ದರ್ಶನ್‌ ಕ್ಲಾರಿಟಿ ಕೊಟ್ಟಿದ್ದಾರೆ. ಇಲ್ಲಿಯೇ ಇಷ್ಟೊಂದು ಪ್ರೀತಿ ಅಭಿಮಾನ ತೋರಿಸಿದ್ದೀರಾ. ಸುಮ್ಮನೆ ಎಲ್ಲಿಗೆ ಎಂದು ಹೋಗಲಿ. ಸಾಯೋವರೆಗೂ ಇಲ್ಲಿಯೇ ಇರುತ್ತೇನೆ. ಇಲ್ಲಿ ಬಿಟ್ಟು ನಾನು ಹೋಗೋಕೆ ಆಗೋದಿಲ್ಲ ಎಂದು ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

52 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

1 hour ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

2 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

3 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago