ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್ಗೆ ದರ್ಶನ್ ಮನವಿಯೊಂದನ್ನು ಮಾಡಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್ ಹೇಳೋದಾ ಎಂದಿರುವ ನಟ ದರ್ಶನ್ ಅವರು, ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆಬ್ರವರಿ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಎಂಬ ಆಸೆಯಿತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
ಇದೇ ವೇಳೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವ ಬಗ್ಗೆ ದರ್ಶನ್ ಕ್ಲಾರಿಟಿ ಕೊಟ್ಟಿದ್ದಾರೆ. ಇಲ್ಲಿಯೇ ಇಷ್ಟೊಂದು ಪ್ರೀತಿ ಅಭಿಮಾನ ತೋರಿಸಿದ್ದೀರಾ. ಸುಮ್ಮನೆ ಎಲ್ಲಿಗೆ ಎಂದು ಹೋಗಲಿ. ಸಾಯೋವರೆಗೂ ಇಲ್ಲಿಯೇ ಇರುತ್ತೇನೆ. ಇಲ್ಲಿ ಬಿಟ್ಟು ನಾನು ಹೋಗೋಕೆ ಆಗೋದಿಲ್ಲ ಎಂದು ಮಾಹಿತಿ ನೀಡಿದರು.
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…
ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು…
ವಾಷಿಂಗ್ಟನ್: ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…