ಬೆಂಗಳೂರು: ಸ್ಯಾಂಡಲ್ವುಡ್ ನಟ ದರ್ಶನ್ಗೆ ಫೆಬ್ರವರಿ.16ರಂದು ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಫ್ಯಾನ್ಸ್ಗೆ ದರ್ಶನ್ ಮನವಿಯೊಂದನ್ನು ಮಾಡಿದ್ದಾರೆ.
ಆರೋಗ್ಯ ಸಮಸ್ಯೆಯಿಂದ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ.
ನನ್ನ ಪ್ರೀತಿಯ ಸೆಲೆಬ್ರಿಟಿಗಳಿಗೆ ನಮಸ್ಕಾರ ಹೇಳೋದಾ ಅಥವಾ ಥ್ಯಾಕ್ಸ್ ಹೇಳೋದಾ ಎಂದಿರುವ ನಟ ದರ್ಶನ್ ಅವರು, ನೀವೆಲ್ಲರೂ ಕೊಟ್ಟಿರುವ ಪ್ರೀತಿಗೆ ಏನು ಹೇಳಿದ್ರೂ ಕಮ್ಮಿನೇ. ಅದನ್ನು ಹೇಗೆ ಹಿಂದಿರುಗಿಸಿ ಕೊಡೋದು ನನಗೆ ಗೊತ್ತಾಗುತ್ತಿಲ್ಲ. ಆದರೆ ಇದೇ ಫೆಬ್ರವರಿ.16ಕ್ಕೆ ನನ್ನ ಹುಟ್ಟುಹಬ್ಬ. ಪ್ರತಿಯೊಬ್ಬರಿಗೂ ಭೇಟಿಯಾಗಿ ಥ್ಯಾಂಕ್ಸ್ ಹೇಳೋಣ ಎಂಬ ಆಸೆಯಿತ್ತು. ನನ್ನ ಆರೋಗ್ಯ ಸಮಸ್ಯೆಯಿಂದ ತುಂಬಾ ಹೊತ್ತು ನಿಂತುಕೊಳ್ಳೋಕೆ ಆಗಲ್ಲ. ಹಾಗಾಗಿ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ.
ಇದೇ ವೇಳೆ ಬೇರೆ ಭಾಷೆಯಲ್ಲಿ ಸಿನಿಮಾ ಮಾಡುವ ಬಗ್ಗೆ ದರ್ಶನ್ ಕ್ಲಾರಿಟಿ ಕೊಟ್ಟಿದ್ದಾರೆ. ಇಲ್ಲಿಯೇ ಇಷ್ಟೊಂದು ಪ್ರೀತಿ ಅಭಿಮಾನ ತೋರಿಸಿದ್ದೀರಾ. ಸುಮ್ಮನೆ ಎಲ್ಲಿಗೆ ಎಂದು ಹೋಗಲಿ. ಸಾಯೋವರೆಗೂ ಇಲ್ಲಿಯೇ ಇರುತ್ತೇನೆ. ಇಲ್ಲಿ ಬಿಟ್ಟು ನಾನು ಹೋಗೋಕೆ ಆಗೋದಿಲ್ಲ ಎಂದು ಮಾಹಿತಿ ನೀಡಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…