ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಆರೋಪದಡಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್ಗೆ ಬೆನ್ನುನೋವು ಕಾಡುತ್ತಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್, ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿ ಕಾಲ ಕಳೆದು ಸೊರಗಿ ಹೋಗಿದ್ದಾರೆ. ಅಲ್ಲದೇ ಈಗ ದಾಸನಿಗೆ ಬೆನ್ನುನೋವು ಕಾಡುತ್ತಿದೆ.
ಜೈಲು ಸೇರಿದಾಗಿನಿಂದ ನಟ ದರ್ಶನ್ ಸುಮಾರು 15 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಜೈಲಿನ ಊಟ, ಏಕಾಂಗಿ ತನ, ಕಟ್ಟುನಿಟ್ಟು ಕ್ರಮವೇ ದರ್ಶನ್ ದೇಹತೂಕ ಕಳೆದುಕೊಳ್ಳಲು ಕಾರಣ ಎಂದು ಹೇಳಲಾಗುತ್ತಿದೆ.
ಜೈಲಿನಲ್ಲಿ ನಟ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿದ್ದು, ಭಾರತೀಯ ಶೈಲಿಯ ಶೌಚಾಲಯ ಬಳಸಲು ಆಗುತ್ತಿಲ್ಲ. ಪಾಶ್ಚಾತ್ಯ ಶೈಲಿಯ ಟಾಯ್ಲೆಟ್ ವ್ಯವಸ್ಥೆ ಮಾಡಿಕೊಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ದರ್ಶನ್ಗೆ ಬೆನ್ನುನೋವಿರುವ ಕಾರಣ ಜೈಲಿನ ವೈದ್ಯರೇ ಚಿಕಿತ್ಸೆ ನೀಡುತ್ತಿದ್ದು, ಪಾಶ್ಚಾತ್ಯ ಟಾಯ್ಲೆಟ್ಗೆ ಅಥವಾ ಸರ್ಜಿಕಲ್ ಚೇರ್ ವ್ಯವಸ್ಥೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಇಬ್ಬರ ಬಂಧನ ಆಗಿದೆ ಎಂದು…
ಉತ್ತರಾಖಂಡ್: ಇಲ್ಲಿನ ಪವಿತ್ರ ಚಾರ್ ಧಾಮ್ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು…
ಮೈಸೂರು: ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ರೈತರ ಪರ ನಿಂತಿದ್ದು,…
ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ…
ಬೆಂಗಳೂರು: ಕರ್ನಾಟಕ ರಾಜ್ಯ ತೆಂಗಿನ ನಾರಿನ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಗ್ರಾಮೀಣ ಮಹಿಳೆಯರಿಂದ ತಯಾರಿಸಲ್ಪಟ್ಟ ಸುಮಾರು 8,000 ಡಚ್…
ಹಾಸನ: ವಿಶ್ವವಿಖ್ಯಾತ ಶ್ರೀ ಚನ್ನಕೇಶವಸ್ವಾಮಿ ಮೂಲ ವಿಗ್ರಹವನ್ನು ಸೂರ್ಯ ರಶ್ಮಿ 2021ರಲ್ಲಿ ಸ್ಪರ್ಶಿಸಿತ್ತು. ಅದಾದ ಬಳಿಕ ಇಂದು ಅಂದರೆ 4…