ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ರನ್ನು ಹೊರ ತರಲೇಬೇಕು ಎಂದು ಪತ್ನಿ ವಿಜಯಲಕ್ಷ್ಮೀ ಶತ ಪ್ರಯತ್ನ ಮಾಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿ.ಕೆ.ಶಿವಕುಮಾರ್ರನ್ನು ಭೇಟಿ ಮಾಡಿ ಕಾನೂನಿನಡಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮೀ ಹಾಗೂ ದಿನಕರ್ ತೂಗುದೀಪ್ ಅವರು, ಕಳೆದ ಒಂದು ತಿಂಗಳಿನಿಂದ ದರ್ಶನ್ ಜೈಲಿನಲ್ಲಿದ್ದಾರೆ. ಆದ್ದರಿಂದ ನೀವು ಕಾನೂನಿನಡಿಯಲ್ಲಿ ಸಹಾಯ ಮಾಡಿ ಎಂದು ಮನವಿ ಮಾಡಿದ್ದಾರೆ.
ವಿಜಯಲಕ್ಷ್ಮೀ, ದಿನಕರ್ ತೂಗುದೀಪ್ ಜೊತೆ ನಿರ್ದೇಶಕ ಜೋಗಿ ಪ್ರೇಮ್ ಕೂಡ ಡಿಕೆಶಿ ಮನೆಗೆ ಭೇಟಿ ನೀಡಿ, ದರ್ಶನ್ ಬಿಡುಗಡೆ ಬಗ್ಗೆ ಕೆಲಕಾಲ ಮಾತುಕತೆ ನಡೆಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ರನ್ನು ಹೊರ ತರಲೇಬೇಕು ಎಂದು ಶತ ಪ್ರಯತ್ನ ಮಾಡುತ್ತಿರುವ ವಿಜಯಲಕ್ಷ್ಮೀ ಅವರು ಡಿಕೆಶಿ ಭೇಟಿ ಮಾಡಿದ್ದು, ಈಗಲಾದರೂ ದರ್ಶನ್ಗೆ ಜಾಮೀನು ಸಿಗುತ್ತಾ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…