ಮನರಂಜನೆ

ಮಿಸ್ಟರ್ ರಾಣಿಯಾಗಿ ಗೆದ್ದ ನಟ ದೀಪಕ್ ಸುಬ್ರಹ್ಮಣ್ಯ

ಹಾಸ್ಯ ಝಲಕ್‌ನಲ್ಲಿ ‘ಮಿಸ್ಟರ್ ರಾಣಿ’ ಲವ್ ಸ್ಟೋರಿ

ಮೈಸೂರು: ಕಲಾವಿದನೊಬ್ಬನಿಗೆ ಒಂದೇ ಸಿನಿಮಾದಲ್ಲೇ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಅವಕಾಶ ಸಿಕ್ಕರೆ ಅದು ನಿಜಕ್ಕೂ ಅದೃಷ್ಟವೇ ಹೌದು. ಇಂಥ ಅವಕಾಶ ಸಿಕ್ಕಿದ್ದು ನಟ ದೀಪಕ್ ಸುಬ್ರಹ್ಮಣ್ಯಗೆ. ಸಿಕ್ಕ ಅವಕಾಶವನ್ನು ಜಾಣ್ಮೆ ಯಿಂದ ಬಳಸಿಕೊಂಡು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.

ಹಿಂದೆ ಡಾ.ರಾಜ್‌ಕುಮಾರ್ ಅವರೂ ತಮ್ಮ ಚಿತ್ರಗಳಲ್ಲಿ ಹೆಣ್ಣಿನ ವೇಷ ಹಾಕಿದ್ದರು. ಪ್ರೇಕ್ಷಕರು ಅದನ್ನು ತುಂಬಾ ಇಷ್ಟಪಟ್ಟಿದ್ದು ಈಗ ಇತಿಹಾಸ. ಇದೇ ಹಾದಿಯನ್ನು ತುಳಿಯಲು ಅನೇಕ ಕಲಾ ವಿದರೂ ಇಷ್ಟ ಪಟ್ಟಿದ್ದರು. ಆದರೆ ಕೆಲವರಿಗೆ ಮಾತ್ರ ಇಂಥ ಅವಕಾಶಗಳು ಕೂಡಿ ಬಂದಿತ್ತು.

ಈ ವಾರ ತೆರೆ ಕಾಣುತ್ತಿರುವ ‘ಮಿಸ್ಟರ್ ರಾಣಿ’ ಚಿತ್ರದ ನಾಯಕ ದೀಪಕ್ ಕೂಡ ಹುಡುಗಿ ವೇಷ ಹಾಕಿ, ನಡೆ-ನುಡಿ ಎರಡರಲ್ಲೂ ಹುಡುಗಿಯರೇ ನಾಚುವಂತೆ ಅಭಿನಯಿಸಿದ್ದಾರೆ. ಇದು ಕ್ರೈಂ, ಥ್ರಿಲ್ಲರ್, ಹಾರರ್, ಲವ್ ಸ್ಟೋರಿಯ ಕಥಾ ಹಂದರ ವಾಗಿದ್ದು, ಚಿತ್ರದ ನಾಯಕನಾಗಿ -ಟ್ಸ್, ರೋಮ್ಯಾನ್ಸ್, ಡ್ಯಾನ್ಸ್‌ಗಳಲ್ಲದೆ ಬೇರೆ ಪಾತ್ರಗಳಲ್ಲೂ ನಟ ದೀಪಕ್ ಮಿಂಚಿದ್ದಾರೆ.

‘ಸೆಲಿ ಮಮ್ಮಿ ಗೂಗಲ್ ಡ್ಯಾಡಿ’ ಖ್ಯಾತಿಯ ನಿರ್ದೇಶಕ ಮಧುಚಂದ್ರ ಈ ಚಿತ್ರ ನಿರ್ದೇಶನ ಮಾಡಿದ್ದು, ಸಿನಿಮಾ ಕಥೆ ಭಾರೀ ಕುತೂಹಲ ಕೆರಳಿಸುತ್ತದೆ. ‘ಹೀರೋ ಆಗಬೇಕು ಅಂಥ ಸಿನಿಮಾ ರಂಗಕ್ಕೆ ಬಂದ ಹುಡುಗ ಆಕಸ್ಮಿಕವಾಗಿ ಹೀರೋಯಿನ್ ಆಗುತ್ತಾನೆ. ಒಬ್ಬ ನಾಯಕನಟಿಗೆ ಚಿತ್ರರಂಗದಲ್ಲಿ ಏನೇನು ತಾಪತ್ರಯಗಳಾಗುತ್ತದೆಅನ್ನೋದನ್ನು ಚಿತ್ರದಲ್ಲಿ ಹಾಸ್ಯರೂಪದಲ್ಲಿ ತೋರಿಸಲಾಗಿದೆ.

ಕಿರುತೆರೆಯಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ನಟ ದೀಪಕ್ ಸುಬ್ರಹ್ಮಣ್ಯ ಹಿರಿತೆರೆಯಲ್ಲಿ ಹೆಣ್ಣಾಗಿ ಕಾಣಿಸಿಕೊಂಡು ಸಿನಿಪ್ರಿಯರು ಆಶ್ಚರ್ಯ ಪಡು ವಂತೆ ಮಾಡಿದ್ದಾರೆ. ಒಬ್ಬ ಹೊಸ ನಟನನ್ನು ಈ ರೀತಿ ಹೆಣ್ಣಾಗಿ ಚೇಂಜ್ ಓವರ್ ಮಾಡೋಕೆ ಸಾಧ್ಯಾನಾ? ಎಂದು ಎಲ್ಲರೂ ಅಚ್ಚರಿಪಟ್ಟಿದ್ದಾರೆ.

ಟೀಸರ್ ನೋಡಿದಾಗ ಚಿತ್ರ ಟೆಕ್ನಿಕಲ್ ಆಗಿಯೂ ತುಂಬಾ ಡಿ-ರೆಂಟ್ ಆಗಿ ಮೂಡಿ ಬಂದಿರೋದು ಎದ್ದು ಕಾಣುತ್ತಿದೆ. ಟೀಸರ್ ಆರಂಭದಲ್ಲಿ ಬರುವ ಅನಿಮೇಷನ್ ನೋಡಿದಾಗ ಇದು ವಿಭಿನ್ನ ರೀತಿಯ ಥಿಯೇಟರ್ ಅನುಭವ ಕೊಡುತ್ತದೆ. ಮಿಸ್ಟರ್ ರಾಣಿ ಒಂದು ಪರಿಪೂರ್ಣ ‘ಹಾಸ್ಯ ಪ್ಯಾಕೇಜ್’ ಇರುವ ಚಿತ್ರವಾಗಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಮಂಜ ಈ ಸಿನಿಮಾದಲ್ಲಿ ಇನ್ನೂ ಜಾಸ್ತಿ ಮಜಾ ಕೊಡುತ್ತಾರೆ. ಚಿತ್ರದ ನಾಯಕ ನಟಿ ಪಾರ್ವತಿ ನಾಯರ್ ಯಾವ ರೀತಿ ಟ್ವಿ ಕೊಡ್ತಾರೆ ಎಂಬುದನ್ನು ಸಿನಿಮಾ ನೋಡಿಯೇ ತಿಳಿಯ ಬೇಕು. ‘ಬಾಹುಬಲಿ’ ಸಿನಿಮಾದಲ್ಲಿ ಅಸಿಸ್ಟೆಂಟ್ ಕ್ಯಾಮೆರಾಮನ್ ಆಗಿದ್ದ ರವೀಂದ್ರ ನಾಥ ಈ ಸಿನಿಮಾದ ಛಾಯಾಗ್ರಾಹಕರಾಗಿದ್ದು, ದೃಶ್ಯಗಳನ್ನು ಸುಂದರವಾಗಿ ಸೆರೆ ಹಿಡಿದಿದ್ದಾರೆ. ಟೀಸರ್ ಯೂಟ್ಯೂಬ್‌ನಲ್ಲಿದೆ. ತುಂಬಾ ಕ್ಯೂರಿ ಯಾಸಿಟಿ ಹುಟ್ಟಿಸಿದೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

11 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

12 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

12 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

12 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

13 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

13 hours ago