ಮನರಂಜನೆ

ರಮ್ಯಾ ಪರ ನಿಂತ ನಟ ಧ್ರುವ ಸರ್ಜಾ

ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಕ್ಕೆ ದರ್ಶನ್‍ ಅಭಿಮಾನಿಗಳಿಂದ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‍ ಆಗಿದ್ದ ನಟಿ ರಮ್ಯಾಗೆ ಇದೀಗ ಧ್ರುವ ಸರ್ಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ದರ್ಶನ್‍ ಬಗ್ಗೆ ಪ್ರಥಮ್‍ ಮಾತನಾಡಿದ್ದು ತಪ್ಪು ಎಂದು ದರ್ಶನ್‍ ಪರ ಮಾತಾಡುತ್ತಲೇ, ಇನ್ನೊಂದು ಕಡೆ ದರ್ಶನ್‍ ಅಭಿಮಾನಿಗಳು ರಮ್ಯಾ ಬಗ್ಗೆ ಕೆಟ್ಟ ಸಂದೇಶಗಳನ್ನು ಕಳಿಸುತ್ತಿರುವ ಬಗ್ಗೆಯೂ ಖಂಡಿಸಿದ್ದಾರೆ. ಈ ವಿಷಯವಾಗಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಗುರುವಾರ ಮಾತನಾಡಿರುವ ಧ್ರುವ, ‘ದರ್ಶನ್‍ ಪ್ರಕರಣದಲ್ಲಿ ರಮ್ಯಾ ಅವರು ತಮ್ಮ ಅಭಿಪ್ರಾಯವನ್ನು ಸೋಷಿಯಲ್‍ ಮೀಡಿಯಾದಲ್ಲಿ ಹಾಕಿದ್ದಾರೆ. ಅದಕ್ಕೆ ಅವರಿಗೆ ಸಾಕಷ್ಟು ಅಶ್ಲೀಲ ಸಂದೇಶಗಳು ಬಂದಿದ್ದು, ಈ ಕುರಿತು ಅವರು ದೂರು ನೀಡಿದ್ದಾರೆ. ಈ ವಿಚಾರದಲ್ಲಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ. ನಾವು ಅವರ ಜೊತೆಗೆ ಇರುತ್ತೇವೆ’ ಎಂದಿದ್ದಾರೆ. ಇದಕ್ಕೂ ಮೊದಲು ನಟ ಶಿವರಾಜಕುಮಾರ್‍ ಸಹ ರಮ್ಯಾ ಪರ ಬೆಂಬಲ ಸೂಚಿಸಿದ್ದರು.

ಇನ್ನು, ದರ್ಶನ್‍ ಅಭಿಮಾನಿಗಳು ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ಪ್ರಥಮ್‍ ನಡುವಿನ ಜಗಳ ತಾರಕಕ್ಕೇರಿದ್ದು. ಈ ಮಧ್ಯೆ, ಈ ವಿಷಯವಾಗಿ ಧ್ರುವ ಸರ್ಜಾ ಮೊದಲ ಬಾರಿಗೆ ಮಾತನಾಡಿದ್ದಾರೆ, ಪ್ರಥಮ್ ವಿಚಾರದಲ್ಲಿ ತಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಧ್ರುವ, ‘ಚಿಟಿಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡಿರೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು. ಅದು ಬಿಟ್ಟು ದರ್ಶನ್ ಬಗ್ಗೆ ಹೀಗೆಲ್ಲಾ ಮಾತಾಡೋದು ಸರಿಯಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

2 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

2 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago