ಮನರಂಜನೆ

ರಮ್ಯಾ ಪರ ನಿಂತ ನಟ ಧ್ರುವ ಸರ್ಜಾ

ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಕ್ಕೆ ದರ್ಶನ್‍ ಅಭಿಮಾನಿಗಳಿಂದ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‍ ಆಗಿದ್ದ ನಟಿ ರಮ್ಯಾಗೆ ಇದೀಗ ಧ್ರುವ ಸರ್ಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ದರ್ಶನ್‍ ಬಗ್ಗೆ ಪ್ರಥಮ್‍ ಮಾತನಾಡಿದ್ದು ತಪ್ಪು ಎಂದು ದರ್ಶನ್‍ ಪರ ಮಾತಾಡುತ್ತಲೇ, ಇನ್ನೊಂದು ಕಡೆ ದರ್ಶನ್‍ ಅಭಿಮಾನಿಗಳು ರಮ್ಯಾ ಬಗ್ಗೆ ಕೆಟ್ಟ ಸಂದೇಶಗಳನ್ನು ಕಳಿಸುತ್ತಿರುವ ಬಗ್ಗೆಯೂ ಖಂಡಿಸಿದ್ದಾರೆ. ಈ ವಿಷಯವಾಗಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಗುರುವಾರ ಮಾತನಾಡಿರುವ ಧ್ರುವ, ‘ದರ್ಶನ್‍ ಪ್ರಕರಣದಲ್ಲಿ ರಮ್ಯಾ ಅವರು ತಮ್ಮ ಅಭಿಪ್ರಾಯವನ್ನು ಸೋಷಿಯಲ್‍ ಮೀಡಿಯಾದಲ್ಲಿ ಹಾಕಿದ್ದಾರೆ. ಅದಕ್ಕೆ ಅವರಿಗೆ ಸಾಕಷ್ಟು ಅಶ್ಲೀಲ ಸಂದೇಶಗಳು ಬಂದಿದ್ದು, ಈ ಕುರಿತು ಅವರು ದೂರು ನೀಡಿದ್ದಾರೆ. ಈ ವಿಚಾರದಲ್ಲಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ. ನಾವು ಅವರ ಜೊತೆಗೆ ಇರುತ್ತೇವೆ’ ಎಂದಿದ್ದಾರೆ. ಇದಕ್ಕೂ ಮೊದಲು ನಟ ಶಿವರಾಜಕುಮಾರ್‍ ಸಹ ರಮ್ಯಾ ಪರ ಬೆಂಬಲ ಸೂಚಿಸಿದ್ದರು.

ಇನ್ನು, ದರ್ಶನ್‍ ಅಭಿಮಾನಿಗಳು ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ಪ್ರಥಮ್‍ ನಡುವಿನ ಜಗಳ ತಾರಕಕ್ಕೇರಿದ್ದು. ಈ ಮಧ್ಯೆ, ಈ ವಿಷಯವಾಗಿ ಧ್ರುವ ಸರ್ಜಾ ಮೊದಲ ಬಾರಿಗೆ ಮಾತನಾಡಿದ್ದಾರೆ, ಪ್ರಥಮ್ ವಿಚಾರದಲ್ಲಿ ತಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಧ್ರುವ, ‘ಚಿಟಿಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡಿರೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು. ಅದು ಬಿಟ್ಟು ದರ್ಶನ್ ಬಗ್ಗೆ ಹೀಗೆಲ್ಲಾ ಮಾತಾಡೋದು ಸರಿಯಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವಕ್ಕೆ ಬೆದರಿಕೆ : ಗುರುಪತ್ವಂತ್‌ ಸಿಂಗ್‌ ವಿರುದ್ಧ ಎಫ್‌ಐಆರ್‌

ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…

6 hours ago

ಕಾಡಾನೆಗಳ ಲಗ್ಗೆ : ಕಬ್ಬಿನ ಫಸಲು ನಾಶ, ಪರಿಹಾರಕ್ಕಾಗಿ ಒತ್ತಾಯ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…

7 hours ago

ಕೊಡಗಿನ ತಿತಿಮತಿಯಲ್ಲಿ ಹುಲಿ ಪ್ರತ್ಯಕ್ಷ ; ಸ್ಥಳೀಯರಲ್ಲಿ ಆತಂಕ

ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…

8 hours ago

ಖಾಸಗಿ ಶಾಲೆಗಳನ್ನು ನಾಚಿಸುವ ಹೈಟೆಕ್ ಸರ್ಕಾರಿ ಶಾಲೆ : ಆದರೆ ಮಕ್ಕಳ ದಾಖಲಾತಿ ಕೇವಲ 40!

ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…

8 hours ago

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಜಾಗ ನೀಡುವಂತೆ ಸಿಎಂಗೆ ಪತ್ರ ಬರೆದಿದ್ದೇನೆ : ಎಚ್‌ಡಿಕೆ

ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…

8 hours ago

ರಾಜ್ಯವೇ ನನ್ನ ಪರಿಮಿತಿ, ಜನ ಬಯಸಿದ ಕಡೆ ಸ್ಪರ್ಧೆ : ಎಚ್‌.ಡಿ.ಕುಮಾರಸ್ವಾಮಿ

ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…

8 hours ago