ಮನರಂಜನೆ

ರಮ್ಯಾ ಪರ ನಿಂತ ನಟ ಧ್ರುವ ಸರ್ಜಾ

ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಕ್ಕೆ ದರ್ಶನ್‍ ಅಭಿಮಾನಿಗಳಿಂದ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‍ ಆಗಿದ್ದ ನಟಿ ರಮ್ಯಾಗೆ ಇದೀಗ ಧ್ರುವ ಸರ್ಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ದರ್ಶನ್‍ ಬಗ್ಗೆ ಪ್ರಥಮ್‍ ಮಾತನಾಡಿದ್ದು ತಪ್ಪು ಎಂದು ದರ್ಶನ್‍ ಪರ ಮಾತಾಡುತ್ತಲೇ, ಇನ್ನೊಂದು ಕಡೆ ದರ್ಶನ್‍ ಅಭಿಮಾನಿಗಳು ರಮ್ಯಾ ಬಗ್ಗೆ ಕೆಟ್ಟ ಸಂದೇಶಗಳನ್ನು ಕಳಿಸುತ್ತಿರುವ ಬಗ್ಗೆಯೂ ಖಂಡಿಸಿದ್ದಾರೆ. ಈ ವಿಷಯವಾಗಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ ಎಂದು ಹೇಳಿದ್ದಾರೆ.

ಈ ಕುರಿತು ಗುರುವಾರ ಮಾತನಾಡಿರುವ ಧ್ರುವ, ‘ದರ್ಶನ್‍ ಪ್ರಕರಣದಲ್ಲಿ ರಮ್ಯಾ ಅವರು ತಮ್ಮ ಅಭಿಪ್ರಾಯವನ್ನು ಸೋಷಿಯಲ್‍ ಮೀಡಿಯಾದಲ್ಲಿ ಹಾಕಿದ್ದಾರೆ. ಅದಕ್ಕೆ ಅವರಿಗೆ ಸಾಕಷ್ಟು ಅಶ್ಲೀಲ ಸಂದೇಶಗಳು ಬಂದಿದ್ದು, ಈ ಕುರಿತು ಅವರು ದೂರು ನೀಡಿದ್ದಾರೆ. ಈ ವಿಚಾರದಲ್ಲಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ. ನಾವು ಅವರ ಜೊತೆಗೆ ಇರುತ್ತೇವೆ’ ಎಂದಿದ್ದಾರೆ. ಇದಕ್ಕೂ ಮೊದಲು ನಟ ಶಿವರಾಜಕುಮಾರ್‍ ಸಹ ರಮ್ಯಾ ಪರ ಬೆಂಬಲ ಸೂಚಿಸಿದ್ದರು.

ಇನ್ನು, ದರ್ಶನ್‍ ಅಭಿಮಾನಿಗಳು ಮತ್ತು ‘ಬಿಗ್ ಬಾಸ್‍’ ಖ್ಯಾತಿಯ ಪ್ರಥಮ್‍ ನಡುವಿನ ಜಗಳ ತಾರಕಕ್ಕೇರಿದ್ದು. ಈ ಮಧ್ಯೆ, ಈ ವಿಷಯವಾಗಿ ಧ್ರುವ ಸರ್ಜಾ ಮೊದಲ ಬಾರಿಗೆ ಮಾತನಾಡಿದ್ದಾರೆ, ಪ್ರಥಮ್ ವಿಚಾರದಲ್ಲಿ ತಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಧ್ರುವ, ‘ಚಿಟಿಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡಿರೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು. ಅದು ಬಿಟ್ಟು ದರ್ಶನ್ ಬಗ್ಗೆ ಹೀಗೆಲ್ಲಾ ಮಾತಾಡೋದು ಸರಿಯಲ್ಲ’ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

51 mins ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

2 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

12 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

12 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

12 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

12 hours ago