druva serja
ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಕ್ಕೆ ದರ್ಶನ್ ಅಭಿಮಾನಿಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಆಗಿದ್ದ ನಟಿ ರಮ್ಯಾಗೆ ಇದೀಗ ಧ್ರುವ ಸರ್ಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ದರ್ಶನ್ ಬಗ್ಗೆ ಪ್ರಥಮ್ ಮಾತನಾಡಿದ್ದು ತಪ್ಪು ಎಂದು ದರ್ಶನ್ ಪರ ಮಾತಾಡುತ್ತಲೇ, ಇನ್ನೊಂದು ಕಡೆ ದರ್ಶನ್ ಅಭಿಮಾನಿಗಳು ರಮ್ಯಾ ಬಗ್ಗೆ ಕೆಟ್ಟ ಸಂದೇಶಗಳನ್ನು ಕಳಿಸುತ್ತಿರುವ ಬಗ್ಗೆಯೂ ಖಂಡಿಸಿದ್ದಾರೆ. ಈ ವಿಷಯವಾಗಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ ಎಂದು ಹೇಳಿದ್ದಾರೆ.
ಈ ಕುರಿತು ಗುರುವಾರ ಮಾತನಾಡಿರುವ ಧ್ರುವ, ‘ದರ್ಶನ್ ಪ್ರಕರಣದಲ್ಲಿ ರಮ್ಯಾ ಅವರು ತಮ್ಮ ಅಭಿಪ್ರಾಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಅದಕ್ಕೆ ಅವರಿಗೆ ಸಾಕಷ್ಟು ಅಶ್ಲೀಲ ಸಂದೇಶಗಳು ಬಂದಿದ್ದು, ಈ ಕುರಿತು ಅವರು ದೂರು ನೀಡಿದ್ದಾರೆ. ಈ ವಿಚಾರದಲ್ಲಿ ರಮ್ಯಾ ತೆಗೆದುಕೊಂಡ ನಿಲುವು ಸರಿ ಇದೆ. ನಾವು ಅವರ ಜೊತೆಗೆ ಇರುತ್ತೇವೆ’ ಎಂದಿದ್ದಾರೆ. ಇದಕ್ಕೂ ಮೊದಲು ನಟ ಶಿವರಾಜಕುಮಾರ್ ಸಹ ರಮ್ಯಾ ಪರ ಬೆಂಬಲ ಸೂಚಿಸಿದ್ದರು.
ಇನ್ನು, ದರ್ಶನ್ ಅಭಿಮಾನಿಗಳು ಮತ್ತು ‘ಬಿಗ್ ಬಾಸ್’ ಖ್ಯಾತಿಯ ಪ್ರಥಮ್ ನಡುವಿನ ಜಗಳ ತಾರಕಕ್ಕೇರಿದ್ದು. ಈ ಮಧ್ಯೆ, ಈ ವಿಷಯವಾಗಿ ಧ್ರುವ ಸರ್ಜಾ ಮೊದಲ ಬಾರಿಗೆ ಮಾತನಾಡಿದ್ದಾರೆ, ಪ್ರಥಮ್ ವಿಚಾರದಲ್ಲಿ ತಾನು ದರ್ಶನ್ ಪರ ನಿಲ್ಲುತ್ತೇನೆ ಎಂದು ಸರ್ಜಾ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಧ್ರುವ, ‘ಚಿಟಿಕೆ ಹೊಡೆದು ವಿಗ್ ಬಗ್ಗೆ ಮಾತಾಡೋದು ಸರಿ ಇಲ್ಲ. ಪ್ರಥಮ್ ಮಾತಾಡಿರೋದು ಸರಿ ಇಲ್ಲ. ಅವರಿಗೆ ಯಾರಾದ್ರೂ ಚಾಕು ತೋರಿಸಿದ್ರೆ ದೂರು ಕೊಡಬೇಕು. ಅದು ಬಿಟ್ಟು ದರ್ಶನ್ ಬಗ್ಗೆ ಹೀಗೆಲ್ಲಾ ಮಾತಾಡೋದು ಸರಿಯಲ್ಲ’ ಎಂದು ಹೇಳಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…