ಮೈಸೂರು: ಕನ್ನಡ ಚಿತ್ರರಂಗದ ನಟ ಡಾಲಿ ಧನಂಜಯ್ ಅವರು ಇದೇ ಫೆಬ್ರವರಿ.15 ಮತ್ತು 16ರಂದು ಮೈಸೂರಿನ ವಸ್ತು ಪ್ರದರ್ಶನ ಆವರಣದಲ್ಲಿ ಧನ್ಯತಾ ಜೊತೆ ವಿವಾಹವಾಗಲಿದ್ದಾರೆ.
ಈ ಹಿನ್ನೆಲೆಯಲ್ಲಿಂದು ವಸ್ತು ಪ್ರದರ್ಶನ ಆವರಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಡಾಲಿ ಧನಂಜಯ್ ಅವರು, ಮದುವೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಮೈಸೂರಿನಲ್ಲೇ ಮದುವೆ ಆಗಬೇಕು ಎನ್ನುವುದು ನಮ್ಮ ಕನಸು. ನನ್ನ ವಿದ್ಯಾಭ್ಯಾಸ, ಚಿತ್ರರಂಗಕ್ಕೆ ಕಾಲಿಟ್ಟಿದ್ದು ಎಲ್ಲವೂ ಮೈಸೂರಿನಿಂದಲೇ ಎಂದರು.
ಇನ್ನು ನನ್ನ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಭಿಮಾನಿಗಳಿಗೆ ಮುಕ್ತ ಅವಕಾಶ ನೀಡಿದ್ದೇವೆ. ಎಲ್ಲರೂ ನೇರವಾಗಿ ಬಂದು ನನಗೆ ಆಶೀರ್ವಾದ ಮಾಡಿ ಹೋಗಬಹುದು. ವಿದ್ಯಾಪತಿ ದ್ವಾರದ ಮೂಲಕ ಅಭಿಮಾನಿಗಳಿಗೆ ಎಂಟ್ರಿ ಇರುತ್ತದೆ ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚಾಮುಂಡೇಶ್ವರಿ ದೇವಾಲಯ ಮಾದರಿಯಲ್ಲಿ ವೇದಿಕೆ ನಿರ್ಮಾಣ ಆಗುತ್ತಿದೆ. ದಕ್ಷಿಣ ಭಾರತದ ಮಾದರಿಯ ಊಟದ ವ್ಯವಸ್ಥೆ ಇದೆ. ಅಭಿಮಾನಿಗಳು, ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಒಂದೇ ಮಾದರಿಯ ಊಟ ಇರುತ್ತದೆ ಎಂದು ತಿಳಿಸಿದರು.
ಇನ್ನು ನಟ ದರ್ಶನ್ ಅವರು ನನ್ನ ಮದುವೆಗೆ ಬಂದರೆ ಸಂತೋಷ ಎಂದ ಅವರು, ಈಗಿನ ಪರಿಸ್ಥಿತಿಯಲ್ಲಿ ದರ್ಶನ್ ಅವರನ್ನು ಭೇಟಿಯಾಗಲು ಆಗುತ್ತಿಲ್ಲ. ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ರನ್ನು ಕರೆಯಲು ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಅವರು ಸಿಗುತ್ತಿಲ್ಲ. ದರ್ಶನ್ ಅವರು ಮದುವೆಗೆ ಬಂದರೆ ಸ್ವಾಗತ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…