ಮನರಂಜನೆ

ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ: ನಟ ದುನಿಯಾ ವಿಜಯ್‌ ಪತ್ನಿ ಪೋಸ್ಟ್‌ ವೈರಲ್‌!

ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್‌ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾ ಆದ ಬೆನ್ನಲ್ಲೇ ಅವರ ಪತ್ನಿ ನಾಗರತ್ನ ಅವರು ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.

ವಿಚ್ಛೇದನ ಪ್ರಕರಣದಲ್ಲಿ ವಿಜಯ್‌ ಪತ್ನಿ ನಾಗರತ್ನ ಪರವಾಗಿ ಕೇಸ್‌ ಬಂದ ಬಗ್ಗೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ. ತಾವು ಸಾಯುವವರೆಗೂ ವಿಜಯ್‌ ಅವರ ಪತ್ನಿಯಾಗಿಯೇ ಸಾಯವುದಾಗಿ ತಮ್ಮ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಪೋಸ್ಟ್‌ನಲ್ಲೇನಿದೆ?

ಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ. ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ, ನನ್ನ ಪತಿ ವಿಜಯ್ ರವರು ತಮಗೆ ವಿಚ್ಛೇದನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ,
ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ,

ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋ ನಿಜ!!! ಏಕೆಂದರೆ ನನಗೆ ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು,

ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು! ಅದನ್ನೇ ಪಾಲಿಸಿಕೊಂಡು ಹೋಗುವಳು ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ! ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ.

ನಮ್ಮ ಕಾನೂನಿನ ಪ್ರಕಾರ ವಿಚ್ಚೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು, ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ,

ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿಎನ್ ನಾಗರಾಜ್ ಸರ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ.

ದಯವಿಟ್ಟು ಮಾದ್ಯಮ ಮಿತ್ರರಿಗೆ ಕೇಳಿಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿ ಯನ್ನು ೨ನೇ ಹೆಂಡ್ತಿ ಅಂತಾ ದಯವಿಟ್ಟು ಪ್ರಸಾರ ಮಾಡಬೇಡಿ! ನಮ್ಮ ಸಂಸಾರ ಚೆನ್ನಾಗಿರಲಿ ಅಂತ ಹರಸಿ ಹಾರೈಸಿ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

https://www.facebook.com/share/p/jk9fSCMpwNJJEEEp/?mibextid=oFDknk

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

8 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

8 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

8 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

8 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

8 hours ago