ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾ ಆದ ಬೆನ್ನಲ್ಲೇ ಅವರ ಪತ್ನಿ ನಾಗರತ್ನ ಅವರು ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.
ವಿಚ್ಛೇದನ ಪ್ರಕರಣದಲ್ಲಿ ವಿಜಯ್ ಪತ್ನಿ ನಾಗರತ್ನ ಪರವಾಗಿ ಕೇಸ್ ಬಂದ ಬಗ್ಗೆ ಅವರು ತಮ್ಮ ಫೇಸ್ಬುಕ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ. ತಾವು ಸಾಯುವವರೆಗೂ ವಿಜಯ್ ಅವರ ಪತ್ನಿಯಾಗಿಯೇ ಸಾಯವುದಾಗಿ ತಮ್ಮ ಪೋಸ್ಟ್ನಲ್ಲಿ ಹೇಳಿಕೊಂಡಿದ್ದಾರೆ.
ಪೋಸ್ಟ್ನಲ್ಲೇನಿದೆ?
ಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ. ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ, ನನ್ನ ಪತಿ ವಿಜಯ್ ರವರು ತಮಗೆ ವಿಚ್ಛೇದನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ,
ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ,
ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋ ನಿಜ!!! ಏಕೆಂದರೆ ನನಗೆ ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು,
ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು! ಅದನ್ನೇ ಪಾಲಿಸಿಕೊಂಡು ಹೋಗುವಳು ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ! ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ.
ನಮ್ಮ ಕಾನೂನಿನ ಪ್ರಕಾರ ವಿಚ್ಚೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು, ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ,
ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿಎನ್ ನಾಗರಾಜ್ ಸರ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ.
ದಯವಿಟ್ಟು ಮಾದ್ಯಮ ಮಿತ್ರರಿಗೆ ಕೇಳಿಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿ ಯನ್ನು ೨ನೇ ಹೆಂಡ್ತಿ ಅಂತಾ ದಯವಿಟ್ಟು ಪ್ರಸಾರ ಮಾಡಬೇಡಿ! ನಮ್ಮ ಸಂಸಾರ ಚೆನ್ನಾಗಿರಲಿ ಅಂತ ಹರಸಿ ಹಾರೈಸಿ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
https://www.facebook.com/share/p/jk9fSCMpwNJJEEEp/?mibextid=oFDknk
ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ…
ಮೈಸೂರು: ರಾಜ್ಯದಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ…
ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…
ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…
ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…
ಚಿಕ್ಕಮಗಳೂರು : ಬಾಬಾಬುಡನ್ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…