ಮನರಂಜನೆ

ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ: ನಟ ದುನಿಯಾ ವಿಜಯ್‌ ಪತ್ನಿ ಪೋಸ್ಟ್‌ ವೈರಲ್‌!

ಕನ್ನಡ ಚಿತ್ರರಂಗದ ಖ್ಯಾತ ನಟ ದುನಿಯಾ ವಿಜಯ್‌ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಅರ್ಜಿ ವಜಾ ಆದ ಬೆನ್ನಲ್ಲೇ ಅವರ ಪತ್ನಿ ನಾಗರತ್ನ ಅವರು ಇದು ನನ್ನ ಹೋರಾಟಕ್ಕೆ ಸಿಕ್ಕ ಜಯ ಎಂದು ಹೇಳಿದ್ದಾರೆ.

ವಿಚ್ಛೇದನ ಪ್ರಕರಣದಲ್ಲಿ ವಿಜಯ್‌ ಪತ್ನಿ ನಾಗರತ್ನ ಪರವಾಗಿ ಕೇಸ್‌ ಬಂದ ಬಗ್ಗೆ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡು ಸಂತಸ ಹಂಚಿಕೊಂಡಿದ್ದಾರೆ. ತಾವು ಸಾಯುವವರೆಗೂ ವಿಜಯ್‌ ಅವರ ಪತ್ನಿಯಾಗಿಯೇ ಸಾಯವುದಾಗಿ ತಮ್ಮ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ.

ಪೋಸ್ಟ್‌ನಲ್ಲೇನಿದೆ?

ಸಮಸ್ತ ನಾಡಿನ ಜನತೆಗೆ ನನ್ನ ನಮಸ್ಕಾರ. ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ, ನನ್ನ ಪತಿ ವಿಜಯ್ ರವರು ತಮಗೆ ವಿಚ್ಛೇದನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ,
ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ ನನಗೆ ಜಯ ಸಿಕ್ಕಿದೆ, ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ,

ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋ ನಿಜ!!! ಏಕೆಂದರೆ ನನಗೆ ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು,

ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು! ಅದನ್ನೇ ಪಾಲಿಸಿಕೊಂಡು ಹೋಗುವಳು ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ! ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ.

ನಮ್ಮ ಕಾನೂನಿನ ಪ್ರಕಾರ ವಿಚ್ಚೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು, ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ,

ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿಎನ್ ನಾಗರಾಜ್ ಸರ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ.

ದಯವಿಟ್ಟು ಮಾದ್ಯಮ ಮಿತ್ರರಿಗೆ ಕೇಳಿಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿ ಯನ್ನು ೨ನೇ ಹೆಂಡ್ತಿ ಅಂತಾ ದಯವಿಟ್ಟು ಪ್ರಸಾರ ಮಾಡಬೇಡಿ! ನಮ್ಮ ಸಂಸಾರ ಚೆನ್ನಾಗಿರಲಿ ಅಂತ ಹರಸಿ ಹಾರೈಸಿ ಎಂದು ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

https://www.facebook.com/share/p/jk9fSCMpwNJJEEEp/?mibextid=oFDknk

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

22 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

22 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

22 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

22 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

22 hours ago