ಬೆಂಗಳೂರು: ಸ್ಯಾಂಡಲ್ವುಡ್ನ ಹೆಸರಾಂತ ನಟ, ನಿರ್ಮಾಪಕ ಹಾಗೂ ನಿರ್ದೆಶಕ ದ್ವಾರಕೀಶ್ ಇಂದು (ಏ.೧೬) ವಿಧಿವಶರಾಗಿದ್ದು, ನಾಳೆ ಬೆಂಗಳೂರಿನಲ್ಲಿ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬುಧವಾರ ಬೆಳಗಿನ ಜಾವದವರೆಗೂ ಪಾರ್ಥೀವ ಶರೀಶ ದರ್ಶನಕ್ಕೆ ಅವಕಾಶ ಕಲಿಸಲಾಗಿದೆ. ಅಂದು ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರಿಕೆ ದರ್ಶನ ವ್ಯವಸ್ಥೆ ಮಾಡಲಾಗಿದೆ. 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್ಮೀಲ್ ಚಿತಾಗಾರಕ್ಕೆ ತರುವ ಮೂಲಕ ಅಂತ್ಯಕ್ರಿಯೆ ನೆರವೇರಲಿದೆ.
ದ್ವಾರಕೀಶ್ ಅವರ ಅಂತಿಮ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.