ಮನರಂಜನೆ

ನನಸಾಯ್ತು ಜಗ್ಗೇಶ್ 40 ವರ್ಷದ ಹಿಂದಿನ ಕನಸು; ಜಗ್ಗೇಶ್‍ ಸ್ಟುಡಿಯೋಸ್‍ ಪ್ರಾರಂಭ

ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ಮಾಪಕರಾಗಿ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಜಗ್ಗೇಶ್‍, ಇದೀಗ ಮಲ್ಲೇಶ್ವರದ ಮನೆಯ ಪಕ್ಕದಲ್ಲೇ ಒಂದು ಅತ್ಯಾಧುನಿಕ ಪೋಸ್ಟ್ ಪ್ರೊಡಕ್ಷನ್‍ ಸ್ಟುಡಿಯೋ ಪ್ರಾರಂಭಿಸಿದ್ದಾರೆ. ಚಿತ್ರರಂಗಕ್ಕೆ ಬೇಕಾದ ಹಲವು ಸೌಲಭ್ಯಗಳನ್ನು ಈ ಸ್ಟುಡಿಯೋದ ಮೂಲಕ ನಿರ್ಮಾಪಕರಿಗೆ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಕೋಮಲ್‍ ಅಭಿನಯದ ಮತ್ತು ನಿರ್ಮಾಣದ ‘ಯಲಾಕುನ್ನಿ’ ಚಿತ್ರದ ಕೆಲಸಗಳು ಈ ಸ್ಟುಡಿಯೋದಲ್ಲಿ ನಡೆದಿದೆ. ಇದಲ್ಲದೇ ಒಂದು ಹಿಂದಿ ಸಿನಿಮಾ ಹಾಗೂ ಮಲಯಾಳಂ ಸಿನಿಮಾದ ಕೆಲಸವೂ ಆಗಿದೆ.

ಇಂಥದ್ದೊಂದು ಸ್ಟುಡಿಯೋ ಮಾಡುವುದು ಜಗ್ಗೇಶ್‍ ಅವರ ಸುಮಾರು 40 ವರ್ಷಗಳ ಕನಸಂತೆ. ಈ ಕುರಿತು ಮಾತನಾಡಿದ ಅವರು, ‘ಗಾಂಧಿನಗರದಲ್ಲಿ ಒಂದು ಸ್ಟುಡಿಯೋದಲ್ಲಿ ಎನ್.ಎಸ್. ರಾವ್ ಡಬ್ಬಿಂಗ್‍ ಮಾಡುತ್ತಿದ್ದದನ್ನು ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲಿ ನೋಡಿದ್ದೆ. ಆ ಸ್ಟುಡಿಯೋ ನೋಡಿ ಬಹಳ ಖುಷಿಯಾಗಿತ್ತು. ಇಂಥದ್ದೊಂದು ಸ್ಟುಡಿಯೋ ಮಾಡುವುದಕ್ಕೆ ಎಷ್ಟು ಖರ್ಚಾಗುತ್ತಿದೆ ಎಂದು ಕೇಳಿದಾಗ, 10 ಲಕ್ಷ ಎಂದು ಹೇಳಿದ್ದರು. ಮುಂದೊಂದು ದಿನ ನಾನು ಒಂದು ಸ್ಟುಡಿಯೋ ಮಾಡಬೇಕು ಎಂಬ ಆಸೆ ಇತ್ತು. ಅದು ಈಗ ಈಡೇರಿದೆ’ ಎನ್ನುತ್ತಾರೆ.

ಸ್ಟುಡಿಯೋ ವಿಶಾಲವಾಗಿರಬೇಕು ಎಂಬುದು ತಮ್ಮ ಆಸೆಯಾಗಿತ್ತು ಎಂದು ಹೇಳಿಕೊಂಡಿರುವ ಅವರು, ‘ಬಹುತೇಕ ಸಂಗೀತ ನಿರ್ದೇಶಕರು ತಮ್ಮ ತಮ್ಮ ಮನೆಗಳಲ್ಲಿ ಸ್ಟುಡಿಯೋ ಮಾಡಿಕೊಂಡು ಕೆಲಸಗಳನ್ನು ಮಾಡುತ್ತಿರುತ್ತಾರೆ. ವಿಶಾಲವಾದ ಜಾಗ ಇರೋದು ಕಡಿಮೆ. ನನ್ನ ಸ್ಟುಡಿಯೋ ವಿಶಾಲವಾಗಿ ಇರಬೇಕು ಎನ್ನುವುದು ನನ್ನ ಆಸೆಯಾಗಿತ್ತು. ಅದೇ ರೀತಿ ಸ್ಟುಡಿಯೋ ವಿಶಾಲವಾಗಿದೆ’ ಎಂದು ಹೇಳಿದ್ದಾರೆ.

ಗ್ರಾಫಿಕ್ಸ್ ಒಂದು ಬಿಟ್ಟರೆ ಮಿಕ್ಕಂತೆ ಈ ಸ್ಟುಡಿಯೋದಲ್ಲಿ ಎಲ್ಲ ಕೆಲಸಗಳನ್ನೂ ಮಾಡಬಹುದು ಎನ್ನುವ ಜಗ್ಗೇಶ್, ‘ಚಿತ್ರೀಕರಣ ಮುಗಿದ ನಂತರ ಫುಟೇಜ್‍ ತಂದುಕೊಟ್ಟರೆ, ಸಿನಿಮಾ ತೆಗೆದುಕೊಂಡು ಹೋಗಬಹುದು. ಗ್ರಾಫಿಕ್ಸ್ ಒಂದು ಬಿಟ್ಟು ಮಿಕ್ಕ ಎಲ್ಲ ಕೆಲಸಗಳು ಇಲ್ಲಿ ಮಾಡಬಹುದು. ಇಲ್ಲಿ ಚಿಕ್ಕ ಬಜೆಟ್, ದೊಡ್ಡ ಬಜೆಟ್ ಸಿನಿಮಾ ಅಂತೇನಿಲ್ಲ. ಎಲ್ಲವನ್ನೂ ಒಂದೇ ತರಹ ಕೆಲಸ ಮಾಡಿಕೊಡಲಾಗುತ್ತದೆ. ಅತ್ಯಾಧುನಿಕ ತಂತ್ರಜ್ಞಾನದ ಉಪಕರಣಗಳನ್ನು ಅಮೇರಿಕಾದಿಂದ ತರಿಸಿ ಈ ಸ್ಟುಡಿಯೋ ಮಾಡಿದ್ದೇನೆ. ಈಗಾಗಲೇ ನಮ್ಮ ಸ್ಟುಡಿಯೋದಲ್ಲಿ ನಾಲ್ಕೈದು ಚಿತ್ರಗಳ ಕೆಲಸಗಳು ನಡೆಯುತ್ತಿವೆ’ ಎನ್ನುತ್ತಾರೆ.

 

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲವಿಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂದು ಎಂಎಲ್‌ಸಿ…

30 mins ago

ನಟ, ರಾಜಕಾರಣಿ ವಿಜಯ್‌ಗೆ 1.5ಕೋಟಿ ದಂಡ : ರಿಟ್‌ ಅರ್ಜಿ ವಜಾಗೊಳಿಸಿದ ಹೈ ಕೋರ್ಟ್‌

ಚೆನ್ನೈ : ಆದಾಯ ತೆರಿಗೆ ಇಲಾಖೆ 1.50 ಕೋಟಿ ರೂಪಾಯಿ ದಂಡ ಪಾವತಿಸುವಂತೆ ನಿರ್ದೇಶಿಸಿದ್ದ ಆದೇಶವನ್ನು ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ…

38 mins ago

ಡ್ರಗ್ಸ್‌ ಸಮೇತ ಸಿಕ್ಕಿಬಿದ್ದ ನಟಿ ಅಂಜುಕೃಷ್ಣ : 8 ಮಂದಿ ಬಂಧನ

ಚೆನ್ನೈ : ತಮಿಳು ಚಿತ್ರರಂಗದ ಒಬ್ಬ ನಟಿ ಮತ್ತು ಸಹಾಯಕ ನಿರ್ದೇಶಕಿ ಸೇರಿದಂತೆ ಒಟ್ಟು ಎಂಟು ಮಂದಿಯನ್ನು ಡ್ರಗ್ಸ್ ಸಮೇತ…

54 mins ago

ಪರೀಕ್ಷಾ ಪೇ ಚರ್ಚಾ | ಇಂಟರ್‌ನೆಟ್‌ನಲ್ಲಿ ಸಮಯ ಕಳೆಯಬೇಡಿ : ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ : ದೇಶದಲ್ಲಿ ಡೇಟಾ ಅಗ್ಗವಾಗಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಇಂಟರ್ನೆಟ್‍ನಲ್ಲಿ ಸಮಯ ವ್ಯರ್ಥ ಮಾಡಬೇಡಿ ಮತ್ತು ಅವರ ಜೀವನ…

1 hour ago

ರಾಜ್ಯದ ಜನತೆಗೆ ಮತ್ತೊಂದು ಶಾಕ್‌ : ವಿದ್ಯುತ್‌ ದರ ಏರಿಕೆ ಸಾಧ್ಯತೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗಿ ಹೈರಾಣಾಗಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು,…

1 hour ago

ಬೆಳ್ಳಂಬೆಳಗ್ಗೆ JCB ಘರ್ಜನೆ ; ಸರ್ಕಾರಿ ಜಾಗ ಅಕ್ರಮ ತೆರವು

ಮೈಸೂರು : ಮೈಸೂರು ನಗರದಲ್ಲಿ ಬೆಳ್ಳಂಬೆಳಿಗ್ಗೆ ಜೆಸಿಬಿ ಘರ್ಜನೆ ಕೇಳಿ ಬಂದಿದ್ದು, ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ಸರ್ಕಾರದ…

3 hours ago