ಬೆಂಗಳೂರು: ಕನ್ನಡ ಚಿತ್ರರಂಗದ ನಟ ಕಿರಣ್ ರಾಜ್ಗೆ ಕಾರು ಅಪಘಾತವಾದ ಬೆನ್ನಲ್ಲೇ ಸೂಕ್ತ ಚಿಕಿತ್ಸೆ ನೀಡಲಾಗಿದೆ.
ಕಾರು ಅಪಘಾತದ ಬಗ್ಗೆ ನಟ ಕಿರಣ್ ರಾಜ್ ರಿಯಾಕ್ಟ್ ಮಾಡಿದ್ದು, ನಾನು ಈಗ ಆರೋಗ್ಯವಾಗಿದ್ದೇನೆ. ಯಾರೂ ಕೂಡ ನನ್ನ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದಾರೆ.
ಏನಾಗಿದೆ ಅನ್ನೋದು ನಿಮೆಗಲ್ಲಾ ಮಾಹಿತಿ ಸಿಕ್ಕಿರುತ್ತದೆ. ಯಾರೆಲ್ಲಾ ಪ್ಯಾನಿಕ್ ಆಗಿ ಮೆಸೇಜ್ ಮಾಡುತ್ತಿರೋ ಚಿಂತಿಸಬೇಡಿ.
ನಾನು ಈಗ ಆರೋಗ್ಯವಾಗಿದ್ದೇನೆ. ನನಗೆ ಸ್ವಲ್ಪ ಏಟಾಗಿತ್ತು. ವೈದ್ಯರು ಸೂಕ್ತ ಚಿಕಿತ್ಸೆ ನೀಡಿದ್ದಾರೆ. ದಯವಿಟ್ಟು ಯಾರೂ ಕೂಡ ಆತಂಕಕ್ಕೆ ಒಳಗಾಗಬೇಡಿ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳುವ ಮೂಲಕ ಹೆಲ್ತ್ ಅಪ್ಡೇಟ್ ನೀಡಿದ್ದಾರೆ.
ಅಂದಹಾಗೆ ಮುದ್ದರಾಯನ ಪಾಳ್ಯ ವೃದ್ಧಾಶ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಎಕ್ಸಿಕ್ಯೂಟರ್ ಪ್ರೊಡ್ಯೂಸರ್ ಗಿರೀಶ್ ಚಾಲನೆ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿತ್ತು.
ಅಪಘಾತದ ರಭಸಕ್ಕೆ ಕಿರಣ್ ರಾಜ್ ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…
ರೇಣುಕಾ ನಿಡುಗುಂದಿ ಜಂತರ್ ಮಂತರ್ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…