ಮನರಂಜನೆ

ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮೊಗ ಅವಿನಾಶ್‌ ದಿವಾಕರ್‌

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಹಾಸ್ಯನಟ ನರಸಿಂಹರಾಜು ಅವರ ಮೊಮ್ಮೊಗ ದಿವಾಕರ್‌ ಈಗ ಕಿರುತೆರೆಗೆ ಎಂಟ್ರಿಕೊಟ್ಟಿದ್ದಾರೆ.

ನರಸಿಂಹರಾಜು ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರ ಮೊಮ್ಮೊಗ ಅವಿನಾಶ್‌ ದಿವಾಕರ್‌ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿರುವ ಅವರು, ಈಗ ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಲಿರುವ ಧಾರಾವಾಹಿಯಲ್ಲಿ ಹೀರೋ ಪಾತ್ರ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ.

ಕಿರುತೆರೆಗೆ ಎಂಟ್ರಿ ಕೊಡುವುದಕ್ಕೆ ಕಾರಣ ನೀಡಿದ ಅವರು, ನಾವು ಕಂಡ ಕನಸ್ಸು ಇಲ್ಲಿಂದಾನೇ ಯಶಸ್ಸು ಕಾಣಬಹುದು. ಹೀರೋಗಳು ಮಾಡದ ದುಡ್ಡನ್ನು ಈಗ ಇನ್‌ಫ್ಲ್ಯೂಯೆನ್ಸ್‌ಗಳು ಮಾಡುತ್ತಿದ್ದಾರೆ. ಅದೇ ರೀತಿ ಕಿರುತೆರೆಗೂ ಭಾರೀ ಬೇಡಿಕೆಯಿದೆ. ಈ ಧಾರಾವಾಹಿಯಲ್ಲಿ ಈ ಪಾತ್ರವನ್ನು ನೀವೇ ಮಾಡಬೇಕು ಎಂಬ ಬೇಡಿಕೆ ಬಂತು. ಹಾಗಾಗಿ ಕಿರುತೆಗೆ ಬರಲು ಒಪ್ಪಿಕೊಂಡೆ ಎಂದು ಖುಷಿ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಭಾರೀ ಹೆಸರು ಮಾಡಿದ್ದ ಹಾಸ್ಯನಟ ನರಸಿಂಹರಾಜು ಅವರು, ಚಿತ್ರರಂಗದ ಯಶಸ್ಸಿಗೆ ಹಗಲಿರುಳು ದುಡಿದಿದ್ದಾರೆ. ಈಗ ಅವರ ಮೊಮ್ಮಗ ಕಿರುತೆರೆಗೆ ಕಾಲಿಟ್ಟಿದ್ದು, ದೊಡ್ಡ ದೊಡ್ಡ ಹೀರೋಗಳ ಲಿಸ್ಟ್‌ನಲ್ಲಿ ಸೇರಲಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

2 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

2 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

2 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

2 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago