ಮನರಂಜನೆ

ಪಕ್ಷ ನೋಡದೇ ವ್ಯಕ್ತಿ ನೋಡಿ ಮತ ಚಲಾಯಿಸಿ: ನಟ ಪ್ರಕಾಶ್‌ ರಾಜ್‌

ಮಂಗಳೂರು: ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಎಂಬುದನ್ನು ನೋಡಬೇಡಿ ಅಭ್ಯರ್ಥಿಯನ್ನು ನೋಡಿ ಮತ ಚಲಾಯಿಸಿ ಎಂದು ನಟ ಪ್ರಕಾಶ್‌ ರಾಜ್‌ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಕಾಶ್‌ ರಾಜ್‌, ಪ್ರಜಾಪ್ರಭುತ್ವದ ಸೊಬಗೇ ಅದು, ನಮಗೆ ಸೂಕ್ತ ಎನಿಸುವ ಅಭ್ಯರ್ಥಿಯನ್ನು ಆಯ್ಕೆಮಾಡಿಕೊಳ್ಳಬೇಕು. ವ್ಯಕ್ತಿ ಸ್ಪರ್ಧಿಸುವ ಪಕ್ಷಕ್ಕಿಂತ ವ್ಯಕ್ತಿತ್ವ ಮುಖ್ಯವಾಗಿರುತ್ತದೆ ಎಂದರು.

ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಅನ್ನೋದು ಬೇರೆ ವಿಷಯ. ಆದರೆ ಅವನು ನಮ್ಮ ನಿಯೋಜಕ ವರ್ಗವನ್ನು ಪ್ರತಿನಿಧಿಸುತ್ತಾನೆಯೇ? ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಾನೆಯೇ? ನಮಗೆ ಅವಶ್ಯವಿರುವ ಸಮಯದಲ್ಲಿ ಕೈಗೆ ಸಿಗುತ್ತಾನೆಯೇ? ಎಂಬುದನ್ನು ಗಮನಿಸಿ ಮತ ಚಲಾಯಿಸಬೇಕು. ನಾವು ಆರಿಸಿ ಕಳಿಸುವ ವ್ಯಕ್ತಿ ನಮ್ಮವನಾಗಿರಬೇಕು ಮತ್ತು ಸದಾ ನಮ್ಮ ಜೊತೆ ಇರಬೇಕು ಎಂದು ಪ್ರಕಾಶ್ ರಾಜ್ ಸಲಹೆ ನೀಡಿದರು.

ರಾಜಕೀಯ ಪಕ್ಷಗಳಿಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ, ನನಗೆ ಯಾವುದೇ ಪಕ್ಷ ಸೇರುವ ಇಚ್ಛೆಯಿಲ್ಲ, ಸಮಾಜ ಮತ್ತು ಮಾಧ್ಯಮ ತನ್ನನ್ನು ಗೌರವಿಸುತ್ತವೆ ನನಗೆ ಅಷ್ಟು ಸಾಕು ಎಂದು ಪ್ರಕಾಶ್ ರಾಜ್ ತಿಳಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

24 mins ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

46 mins ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

54 mins ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

14 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

14 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

15 hours ago