ಮಂಗಳೂರು: ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಎಂಬುದನ್ನು ನೋಡಬೇಡಿ ಅಭ್ಯರ್ಥಿಯನ್ನು ನೋಡಿ ಮತ ಚಲಾಯಿಸಿ ಎಂದು ನಟ ಪ್ರಕಾಶ್ ರಾಜ್ ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪ್ರಕಾಶ್ ರಾಜ್, ಪ್ರಜಾಪ್ರಭುತ್ವದ ಸೊಬಗೇ ಅದು, ನಮಗೆ ಸೂಕ್ತ ಎನಿಸುವ ಅಭ್ಯರ್ಥಿಯನ್ನು ಆಯ್ಕೆಮಾಡಿಕೊಳ್ಳಬೇಕು. ವ್ಯಕ್ತಿ ಸ್ಪರ್ಧಿಸುವ ಪಕ್ಷಕ್ಕಿಂತ ವ್ಯಕ್ತಿತ್ವ ಮುಖ್ಯವಾಗಿರುತ್ತದೆ ಎಂದರು.
ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಅನ್ನೋದು ಬೇರೆ ವಿಷಯ. ಆದರೆ ಅವನು ನಮ್ಮ ನಿಯೋಜಕ ವರ್ಗವನ್ನು ಪ್ರತಿನಿಧಿಸುತ್ತಾನೆಯೇ? ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತಾನೆಯೇ? ನಮಗೆ ಅವಶ್ಯವಿರುವ ಸಮಯದಲ್ಲಿ ಕೈಗೆ ಸಿಗುತ್ತಾನೆಯೇ? ಎಂಬುದನ್ನು ಗಮನಿಸಿ ಮತ ಚಲಾಯಿಸಬೇಕು. ನಾವು ಆರಿಸಿ ಕಳಿಸುವ ವ್ಯಕ್ತಿ ನಮ್ಮವನಾಗಿರಬೇಕು ಮತ್ತು ಸದಾ ನಮ್ಮ ಜೊತೆ ಇರಬೇಕು ಎಂದು ಪ್ರಕಾಶ್ ರಾಜ್ ಸಲಹೆ ನೀಡಿದರು.
ರಾಜಕೀಯ ಪಕ್ಷಗಳಿಗೆ ಸೇರುವ ವಿಚಾರಕ್ಕೆ ಸಂಬಂಧಿಸಿದಂತೆ, ನನಗೆ ಯಾವುದೇ ಪಕ್ಷ ಸೇರುವ ಇಚ್ಛೆಯಿಲ್ಲ, ಸಮಾಜ ಮತ್ತು ಮಾಧ್ಯಮ ತನ್ನನ್ನು ಗೌರವಿಸುತ್ತವೆ ನನಗೆ ಅಷ್ಟು ಸಾಕು ಎಂದು ಪ್ರಕಾಶ್ ರಾಜ್ ತಿಳಿಸಿದರು.
ಬೀಚಿಂಗ್ : ಚೀನಾದ ವಿರುದ್ಧ ಬಹಿರಂಗವಾಗಿಯೇ ಆಕ್ರೋಶ ಹೊರಹಾಕುತ್ತಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಚೀನಾವನ್ನು ಹಾಡಿ ಹೊಗಳಿದ್ದಾರೆ.…
ನವದೆಹಲಿ : ಸ್ಲೀಪರ್ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮೇಲೆ ಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನಂಗ್ಲೋಯಿಯಲ್ಲಿ ನಡೆದಿದೆ. ಬಸ್ಸಿನಲ್ಲಿ…
ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…