ತಮಿಳುನಾಡು: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರ ಜಯ ಗಳಿಸಿದ ಬಳಿಕ ಇಂದು (ಜೂನ್.9) ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಶುಭಗಳಿಗೆಗೆ ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಅವರು ಶುಭ ಕೋರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುತ್ತಿರುವುದು ದೊಡ್ಡ ಸಾಧನೆಯಾಗಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.
ಇಂದು ತಮ್ಮ ತಮಿಳುನಾಡಿನ ನಿವಾಸದಿಂದ ದೆಹಲಿಗೆ ತೆರಳುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜವಾಹರಲಾಲ್ ನೆಹರು ಬಳಿಕ ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಮೋದಿ ಅವರಿಗೆ ನನ್ನ ಹೃದಯಪೂರ್ವಕ ಶುಭಾಷಯಗಳು ಎಂದು ಹೇಳಿದರು.
ಇಂದು ಮೋದಿ ಪ್ರಮಾಣವಚನ ಸ್ವೀಕಾರಕ್ಕೆ 8 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದ್ದು, ಇದರಲ್ಲಿ ನಟ ರಜನಿಕಾಂತ್ ಅವರಿಗೂ ಆಹ್ವಾನ ನೀಡಿದ್ದು ಇಂದು ದೆಹಲಿಗೆ ತೆರಳಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…