ತಮಿಳುನಾಡು: 18ನೇ ಸಾರ್ವತ್ರಿಕ ಚುನಾವಣೆಯಲ್ಲಿ ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರ ಜಯ ಗಳಿಸಿದ ಬಳಿಕ ಇಂದು (ಜೂನ್.9) ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ಶುಭಗಳಿಗೆಗೆ ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಅವರು ಶುಭ ಕೋರಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುತ್ತಿರುವುದು ದೊಡ್ಡ ಸಾಧನೆಯಾಗಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕರ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.
ಇಂದು ತಮ್ಮ ತಮಿಳುನಾಡಿನ ನಿವಾಸದಿಂದ ದೆಹಲಿಗೆ ತೆರಳುವ ಮುನ್ನಾ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜವಾಹರಲಾಲ್ ನೆಹರು ಬಳಿಕ ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಮೋದಿ ಅವರಿಗೆ ನನ್ನ ಹೃದಯಪೂರ್ವಕ ಶುಭಾಷಯಗಳು ಎಂದು ಹೇಳಿದರು.
ಇಂದು ಮೋದಿ ಪ್ರಮಾಣವಚನ ಸ್ವೀಕಾರಕ್ಕೆ 8 ಸಾವಿರ ಮಂದಿಗೆ ಆಹ್ವಾನ ನೀಡಲಾಗಿದ್ದು, ಇದರಲ್ಲಿ ನಟ ರಜನಿಕಾಂತ್ ಅವರಿಗೂ ಆಹ್ವಾನ ನೀಡಿದ್ದು ಇಂದು ದೆಹಲಿಗೆ ತೆರಳಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…