ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್ ಬುಲೆಟ್ ಕ್ಷಮೆಯಾಚಿಸಿದ್ದಾರೆ.
ಶೋವೊಂದರಲ್ಲಿ ಡೈಲಾಗ್ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು ತಿರುಗಿ ಬಿದ್ದಿದ್ದರು.
ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಟ ರಕ್ಷಕ್ ಬುಲೆಟ್ ಕ್ಷಮೆಯಾಚಿಸಿದ್ದು, ಯಾರಿಗಾದರೂ ಬೇಸರವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಅಚಾತುರ್ಯ ನಡೆಯುವುದಿಲ್ಲ ಎಂದು ಮನವಿ ಮಾಡಿದ್ದಾರೆ.
ನಮ್ಮ ಫ್ಯಾಮಿಲಿ ಕೂಡ ತಾಯಿ ಚಾಮುಂಡೇಶ್ವರಿಯ ಪರಮ ಭಕ್ತರು. ನಮ್ಮ ತಂದೆ ಇದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ಬಂದಿದ್ದೇವೆ.
ನಾನು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುತ್ತೇನೆ.
ನಾನು ಯಾರ ಭಾವನೆಗಳಿಗೂ, ಮನಸ್ಸಿಗೂ ನೋವುಂಟು ಮಾಡುವ ಕೆಲಸ ಮಾಡಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಕ್ಷಮೆ ಕೋರಿದ್ದಾರೆ.
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್ಆರ್ಟಿಸಿ ಬಸ್…