ಬೆಂಗಳೂರು: ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿನ ಕಾಪಿರೈಟ್ಸ್ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಕನ್ನಡದ ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಶವಂತಪುರ ಪೊಲೀಸ್ ಠಾಣೆಯಲ್ಲಿ ಇಂದು (ಶುಕ್ರವಾರ, ಆ.2) ವಿಚಾರಣೆ ಎದುರಿಸಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಈ ಎಲ್ಲವನ್ನೂ ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದು ಹೇಳುವ ಮೂಲಕ ನ್ಯಾಯಾಲಯ ಮೊರೆ ಹೋಗುವುದಾಗಿ ರಕ್ಷಿತ್ ಹೇಳಿದ್ದಾರೆ.
ಮೊದಲಿಗೆ ಇದು ಉಲ್ಲಂಘನೆಯಲ್ಲ. ಕನ್ನಡದ ಹಾಡನ್ನು ಕನ್ನಡ ಚಿತ್ರಗಳಲ್ಲಿ ಬಳಕೆ ಮಾಡುವುದು ತಪ್ಪಾ? ಕೇವಲ ಸಾಂದರ್ಭಿಕವಾಗಿ ಹಾಡನ್ನು ಬಳಸಲಾಗಿದೆಯಷ್ಟೆ. ಕಾಪಿರೈಟ್ಸ್ ಬಗ್ಗೆ ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದು ಹೇಳಿದರು.
ಬ್ಯಾಚುಲರ್ ಪಾರ್ಟಿ ಚಿತ್ರದಲ್ಲಿ ಬಳಸಲಾದ ಹಾಡು ವಿಚಾರಕ್ಕೆ ಸಂಬಂಧಿಸಿದಂತೆ ಅತೀ ಹೆಚ್ಚು ಹಣದ ಬೇಡಿಕೆಯಿಟ್ಟಿದ್ದರು. ಹಾಗಾಗಿ ಮುಂದೆ ನೋಡೋಣ ಎಂದು ಹೇಳಿ ಬಂದಿದ್ದೆ. ಈಗ ಚಿತ್ರ ರಿಲೀಸ್ ಆದ ಬಳಿಕ ಈಗ ಕೇಸ್ ಹಾಕಿದ್ದಾರೆ. ಮುಂದೆ ಇದನ್ನು ನೋಡಕೊಳ್ಳಲಾಗುವುದು ಎಂದು ಹೇಳಿದರು.
ಎಂಟಿಆರ್ ಮೂಸಿಕ್ ಪಾಲುದಾರ ನವೀನ್ ಅವರು ಜು.15ರಂದು ರಕ್ಷಿತ್ ವಿರುದ್ಧ ಕಾಪಿರೈಟ್ಸ್ ದೂರು ನೀಡಿದ್ದರು. ನ್ಯಾಯ ಎಲ್ಲಿದೆ ಚಿತ್ರದ ಹಾಡು ಹಾಗೂ ಗಾಳಿ ಮಾತು ಚಿತ್ರದ ಒಮ್ಮೆ ನಿನ್ನನ್ನು ಹಾಡುಗಳನ್ನು ಪರಮ್ ಸ್ಟುಡಿಯೋಸ್ ಅನಧಿಕೃತವಾಗಿ ಬಳಸಿಕೊಂಡಿದೆ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು.
ಈ ಹಿಂದೆ ಕಿರಿಕ್ ಪಾರ್ಟಿ ಚಿತ್ರದಲ್ಲಿಯೂ ಸಹಾ ಇದೇ ರೀತಿ ಕಾಪರೈಟ್ಸ್ ಎದುರಿಸಿದ್ದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…