ಮನರಂಜನೆ

ಎಲ್ಲವನ್ನು ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ: ಕಾಪಿರೈಟ್ಸ್‌ ಬಗ್ಗೆ ರಕ್ಷಿತ್‌ ಶೆಟ್ಟಿ ಪ್ರತಿಕ್ರಿಯೆ

ಬೆಂಗಳೂರು: ಬ್ಯಾಚುಲರ್‌ ಪಾರ್ಟಿ ಚಿತ್ರದಲ್ಲಿನ ಕಾಪಿರೈಟ್ಸ್‌ ಉಲ್ಲಂಘನೆ ಆರೋಪದಲ್ಲಿ ಸಿಲುಕಿರುವ ಕನ್ನಡದ ನಟ, ನಿರ್ದೇಶಕ ರಕ್ಷಿತ್‌ ಶೆಟ್ಟಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಇಂದು (ಶುಕ್ರವಾರ, ಆ.2) ವಿಚಾರಣೆ ಎದುರಿಸಿದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಈ ಎಲ್ಲವನ್ನೂ ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದು ಹೇಳುವ ಮೂಲಕ ನ್ಯಾಯಾಲಯ ಮೊರೆ ಹೋಗುವುದಾಗಿ ರಕ್ಷಿತ್‌ ಹೇಳಿದ್ದಾರೆ.

ಮೊದಲಿಗೆ ಇದು ಉಲ್ಲಂಘನೆಯಲ್ಲ. ಕನ್ನಡದ ಹಾಡನ್ನು ಕನ್ನಡ ಚಿತ್ರಗಳಲ್ಲಿ ಬಳಕೆ ಮಾಡುವುದು ತಪ್ಪಾ? ಕೇವಲ ಸಾಂದರ್ಭಿಕವಾಗಿ ಹಾಡನ್ನು ಬಳಸಲಾಗಿದೆಯಷ್ಟೆ. ಕಾಪಿರೈಟ್ಸ್‌ ಬಗ್ಗೆ ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ ಎಂದು ಹೇಳಿದರು.

ಬ್ಯಾಚುಲರ್‌ ಪಾರ್ಟಿ ಚಿತ್ರದಲ್ಲಿ ಬಳಸಲಾದ ಹಾಡು ವಿಚಾರಕ್ಕೆ ಸಂಬಂಧಿಸಿದಂತೆ ಅತೀ ಹೆಚ್ಚು ಹಣದ ಬೇಡಿಕೆಯಿಟ್ಟಿದ್ದರು. ಹಾಗಾಗಿ ಮುಂದೆ ನೋಡೋಣ ಎಂದು ಹೇಳಿ ಬಂದಿದ್ದೆ. ಈಗ ಚಿತ್ರ ರಿಲೀಸ್‌ ಆದ ಬಳಿಕ ಈಗ ಕೇಸ್‌ ಹಾಕಿದ್ದಾರೆ. ಮುಂದೆ ಇದನ್ನು ನೋಡಕೊಳ್ಳಲಾಗುವುದು ಎಂದು ಹೇಳಿದರು.

ಎಂಟಿಆರ್‌ ಮೂಸಿಕ್‌ ಪಾಲುದಾರ ನವೀನ್‌ ಅವರು ಜು.15ರಂದು ರಕ್ಷಿತ್‌ ವಿರುದ್ಧ ಕಾಪಿರೈಟ್ಸ್‌ ದೂರು ನೀಡಿದ್ದರು. ನ್ಯಾಯ ಎಲ್ಲಿದೆ ಚಿತ್ರದ ಹಾಡು ಹಾಗೂ ಗಾಳಿ ಮಾತು ಚಿತ್ರದ ಒಮ್ಮೆ ನಿನ್ನನ್ನು ಹಾಡುಗಳನ್ನು ಪರಮ್‌ ಸ್ಟುಡಿಯೋಸ್‌ ಅನಧಿಕೃತವಾಗಿ ಬಳಸಿಕೊಂಡಿದೆ ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ಹಿಂದೆ ಕಿರಿಕ್‌ ಪಾರ್ಟಿ ಚಿತ್ರದಲ್ಲಿಯೂ ಸಹಾ ಇದೇ ರೀತಿ ಕಾಪರೈಟ್ಸ್‌ ಎದುರಿಸಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

5 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

5 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

5 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

5 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

5 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

8 hours ago