ಮನರಂಜನೆ

ನಟ ಶಿವಣ್ಣ ಮನೆ ಸಾಕು ನಾಯಿ ನೀಮೋ ನಿಧನ: ಬಾವುಕ ಪತ್ರ ಬರೆದ ಗೀತಾ ಶಿವರಾಜ್‌ ಕುಮಾರ್‌

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್‌ ಕುಮಾರ್‌ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ.

ಶಿವರಾಜ್‌ ಕುಮಾರ್‌ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್‌ ಆಗಿ ಕೊಟ್ಟಿದ್ದರು.

ನಿರುಪಮಾ ಅವರು ಡಾಕ್ಟರ್‌ ಆಗಿರುವ ಕಾರಣಕ್ಕೆ ಅದನ್ನು ಸಮಯಕ್ಕೆ ಸರಿಯಾಘಿ ನೋಡಿಕೊಳ್ಳಲು ಆಗಲ್ಲ ಎಂಬ ಕಾರಣಕ್ಕೆ ಆ ನಾಯಿ ಶಿವಣ್ಣ ಅವರ ಮನೆಯಲ್ಲೇ ಇತ್ತು.

ಆದ್ರೆ ನೀಮೋ ಇಂದು ಚಿರನಿದ್ರೆಗೆ ಜಾರಿಗೆ. ನೀಮೋ ಸಾವನ್ನಪ್ಪಿರುವ ಬಗ್ಗೆ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪತ್ರವೊಂದನ್ನು ಬರೆದು ಪೋಸ್ಟ್‌ ಮಾಡಿದ್ದಾರೆ.

ನಟ ಶಿವರಾಜ್‌ ಕುಮಾರ್‌ ಅವರು ಕಳೆದ ವಾರ ಅಮೆರಿಕಾಗೆ ಚಿಕಿತ್ಸೆಗೆ ಹೊರಡುವ ವೇಳೆ ನಾಯಿ ನೀಮೋ ಅವರ ಜೊತೆಯಲ್ಲೇ ಇದ್ದು ಬೀಳ್ಕೊಟ್ಟಿದೆ. ಆದರೆ ಈಗ ನೀಮೋ ಮೃತಪಟ್ಟಿದ್ದು, ಮನೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಈ ಬಗ್ಗೆ ಪತ್ರ ಬರೆದಿರುವ ಗೀತಾ ಶಿವರಾಜ್‌ ಕುಮಾರ್‌ ಅವರು, ಪತ್ರದಲ್ಲಿ ಆ ನಾಯಿ ನೀಮೋ ಮನೆಯಲ್ಲಿ ಹೇಗಿರುತ್ತಿತ್ತು. ಗೀತಾ ಅವರನ್ನು ಅದೆಷ್ಟು ಇಷ್ಟಪಡುತ್ತಿತ್ತು ಎಂದು ಉಲ್ಲೇಖಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಂ-ಮೈ ಹೆದ್ದಾರಿಯಲ್ಲಿ ಕಾರು-ಬಸ್ ಡಿಕ್ಕಿ ; ತಪ್ಪಿದ ಭಾರೀ ಅನಾಹುತ, ಪ್ರಯಾಣಿಕರು ಪಾರು

ಮಂಡ್ಯ : ಬೆಂಗಳೂರು-ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಕಾರು ಮತ್ತು ಬಸ್ ನಡುವೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್…

10 mins ago

ಅಮೆರಿಕ ವಶವಾದ ಇರಾನ್‌ ಹಡಗು ; ಸಶಸ್ತ್ರ ಕಡಲ್ಗಳ್ಳತನ ಎಂದ ಇರಾನ್‌

ವಾಷಿಂಗ್ಟನ್ : ಇರಾನ್ ಧ್ವಜವಿರುವ ಸರಕು ಹಡಗನ್ನು (ಟೂಸ್ಕಾ) ಒಮಾನ್ ಕೊಲ್ಲಿಯಲ್ಲಿ (ಹಾರ್ಮುಜ್ ಜಲಸಂಧಿ ಸಮೀಪ) ನಮ್ಮ ಭದ್ರತಾ ಪಡೆಗಳು…

26 mins ago

ದಲಿತ ಚಿಂತಕ ಧೀಮಂತ ನಾಯಕ ಡಾ.ಎಚ್.ಸಿ.ಮಹದೇವಪ್ಪ ಅವರ ಹೋರಾಟದ ಕತೆ……

‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್‌.ಟಿ.ವಿಠ್ಠಲಮೂರ್ತಿ ನಾನು…

1 hour ago

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

4 hours ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

4 hours ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

5 hours ago