ಮನರಂಜನೆ

ನಟ ಶಿವಣ್ಣ ಮನೆ ಸಾಕು ನಾಯಿ ನೀಮೋ ನಿಧನ: ಬಾವುಕ ಪತ್ರ ಬರೆದ ಗೀತಾ ಶಿವರಾಜ್‌ ಕುಮಾರ್‌

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಶಿವರಾಜ್‌ ಕುಮಾರ್‌ ಅವರು ಶಸ್ತ್ರಚಿಕಿತ್ಸೆ ಮಾಡಿಕೊಂಡು ವಿಶ್ರಾಂತಿಯಲ್ಲಿರುವಾಗಲೇ ಅವರ ಮನೆ ನಾಯಿ ನೀಮೋ ನಿಧನ ಹೊಂದಿದೆ.

ಶಿವರಾಜ್‌ ಕುಮಾರ್‌ ಅವರ ದೊಡ್ಡ ಮಗಳು ನಿರುಪಮಾ ಅವರ ಪತಿ ಮದುವೆಗೂ ಮೊದಲು ಆ ನಾಯಿಯನ್ನು ಗಿಫ್ಟ್‌ ಆಗಿ ಕೊಟ್ಟಿದ್ದರು.

ನಿರುಪಮಾ ಅವರು ಡಾಕ್ಟರ್‌ ಆಗಿರುವ ಕಾರಣಕ್ಕೆ ಅದನ್ನು ಸಮಯಕ್ಕೆ ಸರಿಯಾಘಿ ನೋಡಿಕೊಳ್ಳಲು ಆಗಲ್ಲ ಎಂಬ ಕಾರಣಕ್ಕೆ ಆ ನಾಯಿ ಶಿವಣ್ಣ ಅವರ ಮನೆಯಲ್ಲೇ ಇತ್ತು.

ಆದ್ರೆ ನೀಮೋ ಇಂದು ಚಿರನಿದ್ರೆಗೆ ಜಾರಿಗೆ. ನೀಮೋ ಸಾವನ್ನಪ್ಪಿರುವ ಬಗ್ಗೆ ಶಿವರಾಜ್‌ ಕುಮಾರ್‌ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘ ಪತ್ರವೊಂದನ್ನು ಬರೆದು ಪೋಸ್ಟ್‌ ಮಾಡಿದ್ದಾರೆ.

ನಟ ಶಿವರಾಜ್‌ ಕುಮಾರ್‌ ಅವರು ಕಳೆದ ವಾರ ಅಮೆರಿಕಾಗೆ ಚಿಕಿತ್ಸೆಗೆ ಹೊರಡುವ ವೇಳೆ ನಾಯಿ ನೀಮೋ ಅವರ ಜೊತೆಯಲ್ಲೇ ಇದ್ದು ಬೀಳ್ಕೊಟ್ಟಿದೆ. ಆದರೆ ಈಗ ನೀಮೋ ಮೃತಪಟ್ಟಿದ್ದು, ಮನೆಯಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಈ ಬಗ್ಗೆ ಪತ್ರ ಬರೆದಿರುವ ಗೀತಾ ಶಿವರಾಜ್‌ ಕುಮಾರ್‌ ಅವರು, ಪತ್ರದಲ್ಲಿ ಆ ನಾಯಿ ನೀಮೋ ಮನೆಯಲ್ಲಿ ಹೇಗಿರುತ್ತಿತ್ತು. ಗೀತಾ ಅವರನ್ನು ಅದೆಷ್ಟು ಇಷ್ಟಪಡುತ್ತಿತ್ತು ಎಂದು ಉಲ್ಲೇಖಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

2 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

2 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago