ಮನರಂಜನೆ

ನಟ ಶಿವರಾಜ್‌ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿ

ಅಮೆರಿಕಾ/ನವದೆಹಲಿ: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಅವರು ನಿನ್ನೆ(ಡಿ.24) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಡಾ.ಮುರುಗೇಶ ಮನೋಹರನ್‌ ತಿಳಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು, ಶಿವರಾಜ್‌ಕುಮಾರ್‌ ಅವರಿಗೆ ನಿನ್ನೆ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿಸಲು ಈ ಸಂವಾದವನ್ನು ಹಂಚಿಕೊಳ್ಳುತ್ತಿರುವುದು ಸಂತೋಷವಾಗುತ್ತಿದೆ ಎಂದಿದ್ದಾರೆ.

ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯೂ ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಸ್ಥಿರವಾಗಿತ್ತು. ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ. ಜೊತೆಗೆ ಪರಿಣಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಹಾಗೂ ಮಾಧ್ಯಮಗಳು ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

49 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

1 hour ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

1 hour ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

2 hours ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

2 hours ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

2 hours ago