ಮನರಂಜನೆ

ನಟ ಶಿವರಾಜ್‌ಕುಮಾರ್ ಅವರ ಶಸ್ತ್ರಚಿಕಿತ್ಸೆ ಯಶಸ್ವಿ

ಅಮೆರಿಕಾ/ನವದೆಹಲಿ: ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಅವರು ನಿನ್ನೆ(ಡಿ.24) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದು ಡಾ.ಮುರುಗೇಶ ಮನೋಹರನ್‌ ತಿಳಿಸಿದ್ದಾರೆ.

ಈ ಕುರಿತು ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿರುವ ಅವರು, ಶಿವರಾಜ್‌ಕುಮಾರ್‌ ಅವರಿಗೆ ನಿನ್ನೆ ಮಾಡಿದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿಸಲು ಈ ಸಂವಾದವನ್ನು ಹಂಚಿಕೊಳ್ಳುತ್ತಿರುವುದು ಸಂತೋಷವಾಗುತ್ತಿದೆ ಎಂದಿದ್ದಾರೆ.

ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯೂ ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಸ್ಥಿರವಾಗಿತ್ತು. ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ. ಜೊತೆಗೆ ಪರಿಣಿತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ ಎಂದು ವಿಡಿಯೋ ಸಂದೇಶದಲ್ಲಿ ಹೇಳಿದ್ದಾರೆ.

ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಹಾಗೂ ಮಾಧ್ಯಮಗಳು ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 3 , ಶುಕ್ರವಾರ

50 mins ago

ನಂಜನಗೂಡು | ಲೋಕಾ ಬಲೆಗೆ ಬಿದ್ದ ಸರ್ವೆಯರ್‌

ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…

14 hours ago

ಅನೈತಿಕ ಸಂಬಂಧದ ಶಂಕೆ : ರಾಡ್‌ನಿಂದ ಹೊಡೆದು ಪತ್ನಿ ಕೊಂದ ಪತಿ

ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ರಾಮನಗರ: ಕಲ್ಲು ಕ್ವಾರಿಯಲ್ಲಿ ದುರಂತ: ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವು

ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…

22 hours ago

ಕೊಡಗಿನಲ್ಲಿ ಸಾಧಾರಣ ಮಳೆ: ಹಾರಂಗಿ ಜಲಾಶಯದ ಒಳಹರಿವು ಹೆಚ್ಚಳ

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…

22 hours ago

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

1 day ago