ಮನರಂಜನೆ

ಕಾಲಿಗೆ ಪೆಟ್ಟು ಮಾಡಿಕೊಂಡು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋರಿಂಗ್‌ ಸ್ಟಾರ್‌!

ಸ್ಯಾಂಡಲ್‌ವುಡ್‌ನ ರೋರಿಂಗ್‌ ಸ್ಟಾರ್‌ ನಟ ಶ್ರೀಮುರಳಿ ಅವರಿಗೆ ಶೂಟಿಂಗ್‌ ವೇಳೆ ಮತ್ತೊಮ್ಮೆ ಪೆಟ್ಟಾಗಿದೆ. ಹೌದು, ʼಬಘೀರಾʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ ಶ್ರೀಮುರುಳಿ ಕಾಲಿಗೆ ಮತ್ತೆ ಗಾಯವಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀಮುರುಳಿ ಅವರ ಬಹು ನಿರೀಕ್ಷಿತ ಚಿತ್ರ ʼಬಘೀರಾʼ ಸಾಕಷ್ಟು ಕುತೂಹಲವನ್ನು ಮೂಡಿಸುತ್ತಿರು ಚಿತ್ರವಾಗಿದೆ. ಈ ಚಿತ್ರದಲ್ಲಿ ಶ್ರೀಮರುಳಿ ಪೊಲೀಸ್‌ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷವಾಗಿದೆ.

ಅಂದಹಾಗೆ ಶ್ರೀಮುರುಳಿ ನಟನೆಯ ಮದಗಜ ಚಿತ್ರ 2021 ರಲ್ಲಿ ಬಿಡುಗಡೆಯಾಗಿತ್ತು. ಇದರ ನಂತರ ಅವರ ನಟನೆಯ ಬೇರಾವುದೇ ಚಿತ್ರ ಈ ವರೆಗೆ ತೆರೆಕಂಡಿಲ್ಲ. ಬಘಿರಾ ಚಿತ್ರತಂಡ ತನ್ನ ಟೀಸರ್‌ ಮೂಲಕ ಆಕ್ಷನ್‌ ಕಥೆಯಾಧರಿತ ಚಿತ್ರ ಮಾಡಲಾಗುವುದು ಎಂದು ಅಭಿಮಾನಿಗಳಿಗೆ ತಿಳಿಸಿತ್ತು.

ʼಮದಗಜʼ ಸೋಲಿನ ನಂತರ ಅಭಿಮಾನಿಗಳಿಗೆ ಒಳ್ಳೇ ಸಿನಿಮಾ ನೀಡಲು ಸ್ವತಃ ಶ್ರೀ ಮುರುಳಿ ಅವರೇ ಯಾವುದೇ ಡೂಪ್‌ ಬಳಸದೇ ಸ್ಟಂಟ್‌ ಸೀನ್‌ಗಳಲ್ಲಿ ಭಾಗವಹಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಇದೇ ಚಿತ್ರದ ಶೂಟಿಂಗ್‌ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದ ನಟ, ಎರಡು ತಿಂಗಳ ರೆಸ್ಟ್‌ ಪಡೆದು ಮತ್ತೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರು.

ಚಿತ್ರ ತಂಡದೊಂದಿಗೆ ಸೇರಿ ಬಘಿರಾ ಸಿನಿಮಾದ ಬಹು ಮಹತ್ವದ ಸ್ಟಂಟ್‌ ಸೀನ್‌ನಲ್ಲಿ ನಟಿಸುವ ವೇಳೆ ಈಗ ಮತ್ತೆ ಕಾಲಿಗೆ ಪಟ್ಟು ಮಾಡಿಕೊಂಡಿದ್ದಾರೆ ಶ್ರೀಮುರುಳಿ. ಸದ್ಯ ಅವರು ಮೈಸೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಬಘೀರಾ ಚಿತ್ರವನ್ನು ಹೊಂಬಾಳೆ ಬ್ಯಾನರ್‌ ಅಡಿಯಲ್ಲಿ ನಿರ್ಮಿಸುತ್ತಿದ್ದು, ಸೂರಿ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್‌ ನೀಲ್‌ ಹಾಗೂ ಸೂರಿ ಕಥೆ ಬರೆದಿದ್ದು, ಪ್ರಕಾಶ್‌ ರಾಜ್‌, ರುಕ್ಮಣಿ ವಸಂತ್‌, ಅಚ್ಚುತ್‌ ಕುಮಾರ್‌, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಂಗಣವೇ ಈ ಚಿತ್ರದಲ್ಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

26 mins ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

39 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…

56 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…

1 hour ago

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…

1 hour ago

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…

2 hours ago