ಮನರಂಜನೆ

ಕಾಲಿಗೆ ಪೆಟ್ಟು ಮಾಡಿಕೊಂಡು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋರಿಂಗ್‌ ಸ್ಟಾರ್‌!

ಸ್ಯಾಂಡಲ್‌ವುಡ್‌ನ ರೋರಿಂಗ್‌ ಸ್ಟಾರ್‌ ನಟ ಶ್ರೀಮುರಳಿ ಅವರಿಗೆ ಶೂಟಿಂಗ್‌ ವೇಳೆ ಮತ್ತೊಮ್ಮೆ ಪೆಟ್ಟಾಗಿದೆ. ಹೌದು, ʼಬಘೀರಾʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ ಶ್ರೀಮುರುಳಿ ಕಾಲಿಗೆ ಮತ್ತೆ ಗಾಯವಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀಮುರುಳಿ ಅವರ ಬಹು ನಿರೀಕ್ಷಿತ ಚಿತ್ರ ʼಬಘೀರಾʼ ಸಾಕಷ್ಟು ಕುತೂಹಲವನ್ನು ಮೂಡಿಸುತ್ತಿರು ಚಿತ್ರವಾಗಿದೆ. ಈ ಚಿತ್ರದಲ್ಲಿ ಶ್ರೀಮರುಳಿ ಪೊಲೀಸ್‌ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷವಾಗಿದೆ.

ಅಂದಹಾಗೆ ಶ್ರೀಮುರುಳಿ ನಟನೆಯ ಮದಗಜ ಚಿತ್ರ 2021 ರಲ್ಲಿ ಬಿಡುಗಡೆಯಾಗಿತ್ತು. ಇದರ ನಂತರ ಅವರ ನಟನೆಯ ಬೇರಾವುದೇ ಚಿತ್ರ ಈ ವರೆಗೆ ತೆರೆಕಂಡಿಲ್ಲ. ಬಘಿರಾ ಚಿತ್ರತಂಡ ತನ್ನ ಟೀಸರ್‌ ಮೂಲಕ ಆಕ್ಷನ್‌ ಕಥೆಯಾಧರಿತ ಚಿತ್ರ ಮಾಡಲಾಗುವುದು ಎಂದು ಅಭಿಮಾನಿಗಳಿಗೆ ತಿಳಿಸಿತ್ತು.

ʼಮದಗಜʼ ಸೋಲಿನ ನಂತರ ಅಭಿಮಾನಿಗಳಿಗೆ ಒಳ್ಳೇ ಸಿನಿಮಾ ನೀಡಲು ಸ್ವತಃ ಶ್ರೀ ಮುರುಳಿ ಅವರೇ ಯಾವುದೇ ಡೂಪ್‌ ಬಳಸದೇ ಸ್ಟಂಟ್‌ ಸೀನ್‌ಗಳಲ್ಲಿ ಭಾಗವಹಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಇದೇ ಚಿತ್ರದ ಶೂಟಿಂಗ್‌ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದ ನಟ, ಎರಡು ತಿಂಗಳ ರೆಸ್ಟ್‌ ಪಡೆದು ಮತ್ತೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರು.

ಚಿತ್ರ ತಂಡದೊಂದಿಗೆ ಸೇರಿ ಬಘಿರಾ ಸಿನಿಮಾದ ಬಹು ಮಹತ್ವದ ಸ್ಟಂಟ್‌ ಸೀನ್‌ನಲ್ಲಿ ನಟಿಸುವ ವೇಳೆ ಈಗ ಮತ್ತೆ ಕಾಲಿಗೆ ಪಟ್ಟು ಮಾಡಿಕೊಂಡಿದ್ದಾರೆ ಶ್ರೀಮುರುಳಿ. ಸದ್ಯ ಅವರು ಮೈಸೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಬಘೀರಾ ಚಿತ್ರವನ್ನು ಹೊಂಬಾಳೆ ಬ್ಯಾನರ್‌ ಅಡಿಯಲ್ಲಿ ನಿರ್ಮಿಸುತ್ತಿದ್ದು, ಸೂರಿ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್‌ ನೀಲ್‌ ಹಾಗೂ ಸೂರಿ ಕಥೆ ಬರೆದಿದ್ದು, ಪ್ರಕಾಶ್‌ ರಾಜ್‌, ರುಕ್ಮಣಿ ವಸಂತ್‌, ಅಚ್ಚುತ್‌ ಕುಮಾರ್‌, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಂಗಣವೇ ಈ ಚಿತ್ರದಲ್ಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

15 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago