ಮನರಂಜನೆ

ಕಾಲಿಗೆ ಪೆಟ್ಟು ಮಾಡಿಕೊಂಡು ಮೈಸೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋರಿಂಗ್‌ ಸ್ಟಾರ್‌!

ಸ್ಯಾಂಡಲ್‌ವುಡ್‌ನ ರೋರಿಂಗ್‌ ಸ್ಟಾರ್‌ ನಟ ಶ್ರೀಮುರಳಿ ಅವರಿಗೆ ಶೂಟಿಂಗ್‌ ವೇಳೆ ಮತ್ತೊಮ್ಮೆ ಪೆಟ್ಟಾಗಿದೆ. ಹೌದು, ʼಬಘೀರಾʼ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರುವ ನಟ ಶ್ರೀಮುರುಳಿ ಕಾಲಿಗೆ ಮತ್ತೆ ಗಾಯವಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶ್ರೀಮುರುಳಿ ಅವರ ಬಹು ನಿರೀಕ್ಷಿತ ಚಿತ್ರ ʼಬಘೀರಾʼ ಸಾಕಷ್ಟು ಕುತೂಹಲವನ್ನು ಮೂಡಿಸುತ್ತಿರು ಚಿತ್ರವಾಗಿದೆ. ಈ ಚಿತ್ರದಲ್ಲಿ ಶ್ರೀಮರುಳಿ ಪೊಲೀಸ್‌ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷವಾಗಿದೆ.

ಅಂದಹಾಗೆ ಶ್ರೀಮುರುಳಿ ನಟನೆಯ ಮದಗಜ ಚಿತ್ರ 2021 ರಲ್ಲಿ ಬಿಡುಗಡೆಯಾಗಿತ್ತು. ಇದರ ನಂತರ ಅವರ ನಟನೆಯ ಬೇರಾವುದೇ ಚಿತ್ರ ಈ ವರೆಗೆ ತೆರೆಕಂಡಿಲ್ಲ. ಬಘಿರಾ ಚಿತ್ರತಂಡ ತನ್ನ ಟೀಸರ್‌ ಮೂಲಕ ಆಕ್ಷನ್‌ ಕಥೆಯಾಧರಿತ ಚಿತ್ರ ಮಾಡಲಾಗುವುದು ಎಂದು ಅಭಿಮಾನಿಗಳಿಗೆ ತಿಳಿಸಿತ್ತು.

ʼಮದಗಜʼ ಸೋಲಿನ ನಂತರ ಅಭಿಮಾನಿಗಳಿಗೆ ಒಳ್ಳೇ ಸಿನಿಮಾ ನೀಡಲು ಸ್ವತಃ ಶ್ರೀ ಮುರುಳಿ ಅವರೇ ಯಾವುದೇ ಡೂಪ್‌ ಬಳಸದೇ ಸ್ಟಂಟ್‌ ಸೀನ್‌ಗಳಲ್ಲಿ ಭಾಗವಹಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಇದೇ ಚಿತ್ರದ ಶೂಟಿಂಗ್‌ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದ ನಟ, ಎರಡು ತಿಂಗಳ ರೆಸ್ಟ್‌ ಪಡೆದು ಮತ್ತೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದರು.

ಚಿತ್ರ ತಂಡದೊಂದಿಗೆ ಸೇರಿ ಬಘಿರಾ ಸಿನಿಮಾದ ಬಹು ಮಹತ್ವದ ಸ್ಟಂಟ್‌ ಸೀನ್‌ನಲ್ಲಿ ನಟಿಸುವ ವೇಳೆ ಈಗ ಮತ್ತೆ ಕಾಲಿಗೆ ಪಟ್ಟು ಮಾಡಿಕೊಂಡಿದ್ದಾರೆ ಶ್ರೀಮುರುಳಿ. ಸದ್ಯ ಅವರು ಮೈಸೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಈ ಬಘೀರಾ ಚಿತ್ರವನ್ನು ಹೊಂಬಾಳೆ ಬ್ಯಾನರ್‌ ಅಡಿಯಲ್ಲಿ ನಿರ್ಮಿಸುತ್ತಿದ್ದು, ಸೂರಿ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಈ ಚಿತ್ರಕ್ಕೆ ಪ್ರಶಾಂತ್‌ ನೀಲ್‌ ಹಾಗೂ ಸೂರಿ ಕಥೆ ಬರೆದಿದ್ದು, ಪ್ರಕಾಶ್‌ ರಾಜ್‌, ರುಕ್ಮಣಿ ವಸಂತ್‌, ಅಚ್ಚುತ್‌ ಕುಮಾರ್‌, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಂಗಣವೇ ಈ ಚಿತ್ರದಲ್ಲಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

1 hour ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

5 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

7 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

9 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

12 hours ago