ಬೆಂಗಳೂರು: ಸೆಪ್ಟೆಂಬರ್.2ರಂದು ನಟ ಸುದೀಪ್ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್ ನಿರ್ಧಾರ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್ ಅವರು, ನನ್ನ ಮನೆಯ ಬಳಿ ಜನ್ಮದಿನದ ಆಚರಣೆಗೆ ಅವಕಾಶ ಇಲ್ಲ. ಈ ವರ್ಷ ಎಂಇಎಸ್ ಮೈದಾನದಲ್ಲಿ ಬೆಳಿಗ್ಗೆ 11.30ರವರೆಗೆ ಸುದೀಪ್ ಇರಲಿದ್ದಾರೆ.
ವರ್ಷಗಳು ಉರುಳುತ್ತಿದ್ದಂತೆ ಅಭಿಮಾನಿಗಳ ಸಂಖ್ಯೆಯೂ ಕೂಡ ಜಾಸ್ತಿಯಾಗುತ್ತಿದೆ. ಕಳೆದ ವರ್ಷದ ಸಂಭ್ರಮಾಚರಣೆ ವೇಳೆ ಸ್ವಲ್ಪ ಗೊಂದಲವಾಯ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮನೆಯ ಬಳಿ ಹುಟ್ಟುಹಬ್ಬ ಆಚರಿಸದಂತೆ ಅಕ್ಕಪಕ್ಕದ ಮನೆಯವರು ಹಾಗೂ ಪೊಲೀಸರು ವಿನಂತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಿಗುತ್ತೇನೆ ಎಂದರು.
ಇನ್ನು ಈ ಬಾರಿಯ ಬಿಗ್ಬಾಸ್ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುವುದು ಅನುಮಾನ ಎನ್ನುವ ಊಹಾಪೋಹದ ಬಗ್ಗೆ ಮಾತನಾಡಿದ ಅವರು, ಬಿಗ್ಬಾಸ್ ಹೊಸ ಆವೃತ್ತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕಾರ್ಯಕ್ರಮ ನಡೆಸಿಕೊಡುವಲ್ಲಿ ನನ್ನ ಭಾಗದಿಂದ ಹೆಚ್ಚು ಪ್ರಯತ್ನವಿದೆ. ಶೋ ಮಾಡಲು ಆಸಕ್ತಿಯೂ ಇದೆ. ಆದರೆ ಕೆಲವೊಮ್ಮೆ ನಾವು ಮುಂದುವರಿಯಬೇಕಾಗುತ್ತದೆ. ಅವರು ಹೊಸ ಮುಖ ಹುಡುಕಲಿ ಎಂದು ವೈಯಕ್ತಿಕವಾಗಿ ಬಯಸುತ್ತೇನೆ ಎಂದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…