ಬೆಂಗಳೂರು: ಸೆಪ್ಟೆಂಬರ್.2ರಂದು ನಟ ಸುದೀಪ್ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್ ನಿರ್ಧಾರ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್ ಅವರು, ನನ್ನ ಮನೆಯ ಬಳಿ ಜನ್ಮದಿನದ ಆಚರಣೆಗೆ ಅವಕಾಶ ಇಲ್ಲ. ಈ ವರ್ಷ ಎಂಇಎಸ್ ಮೈದಾನದಲ್ಲಿ ಬೆಳಿಗ್ಗೆ 11.30ರವರೆಗೆ ಸುದೀಪ್ ಇರಲಿದ್ದಾರೆ.
ವರ್ಷಗಳು ಉರುಳುತ್ತಿದ್ದಂತೆ ಅಭಿಮಾನಿಗಳ ಸಂಖ್ಯೆಯೂ ಕೂಡ ಜಾಸ್ತಿಯಾಗುತ್ತಿದೆ. ಕಳೆದ ವರ್ಷದ ಸಂಭ್ರಮಾಚರಣೆ ವೇಳೆ ಸ್ವಲ್ಪ ಗೊಂದಲವಾಯ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮನೆಯ ಬಳಿ ಹುಟ್ಟುಹಬ್ಬ ಆಚರಿಸದಂತೆ ಅಕ್ಕಪಕ್ಕದ ಮನೆಯವರು ಹಾಗೂ ಪೊಲೀಸರು ವಿನಂತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಿಗುತ್ತೇನೆ ಎಂದರು.
ಇನ್ನು ಈ ಬಾರಿಯ ಬಿಗ್ಬಾಸ್ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುವುದು ಅನುಮಾನ ಎನ್ನುವ ಊಹಾಪೋಹದ ಬಗ್ಗೆ ಮಾತನಾಡಿದ ಅವರು, ಬಿಗ್ಬಾಸ್ ಹೊಸ ಆವೃತ್ತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕಾರ್ಯಕ್ರಮ ನಡೆಸಿಕೊಡುವಲ್ಲಿ ನನ್ನ ಭಾಗದಿಂದ ಹೆಚ್ಚು ಪ್ರಯತ್ನವಿದೆ. ಶೋ ಮಾಡಲು ಆಸಕ್ತಿಯೂ ಇದೆ. ಆದರೆ ಕೆಲವೊಮ್ಮೆ ನಾವು ಮುಂದುವರಿಯಬೇಕಾಗುತ್ತದೆ. ಅವರು ಹೊಸ ಮುಖ ಹುಡುಕಲಿ ಎಂದು ವೈಯಕ್ತಿಕವಾಗಿ ಬಯಸುತ್ತೇನೆ ಎಂದರು.
ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…
ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…
ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…