ಮನರಂಜನೆ

ಈ ಬಾರಿ ಜಯನಗರದ ಎಂಇಎಸ್‌ ಮೈದಾನದಲ್ಲಿ ಸುದೀಪ್‌ ಜನ್ಮದಿನಾಚರಣೆ

ಬೆಂಗಳೂರು: ಸೆಪ್ಟೆಂಬರ್.‌2ರಂದು ನಟ ಸುದೀಪ್‌ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್‌ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್‌ ನಿರ್ಧಾರ ಮಾಡಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್‌ ಅವರು, ನನ್ನ ಮನೆಯ ಬಳಿ ಜನ್ಮದಿನದ ಆಚರಣೆಗೆ ಅವಕಾಶ ಇಲ್ಲ. ಈ ವರ್ಷ ಎಂಇಎಸ್‌ ಮೈದಾನದಲ್ಲಿ ಬೆಳಿಗ್ಗೆ 11.30ರವರೆಗೆ ಸುದೀಪ್‌ ಇರಲಿದ್ದಾರೆ.

ವರ್ಷಗಳು ಉರುಳುತ್ತಿದ್ದಂತೆ ಅಭಿಮಾನಿಗಳ ಸಂಖ್ಯೆಯೂ ಕೂಡ ಜಾಸ್ತಿಯಾಗುತ್ತಿದೆ. ಕಳೆದ ವರ್ಷದ ಸಂಭ್ರಮಾಚರಣೆ ವೇಳೆ ಸ್ವಲ್ಪ ಗೊಂದಲವಾಯ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮನೆಯ ಬಳಿ ಹುಟ್ಟುಹಬ್ಬ ಆಚರಿಸದಂತೆ ಅಕ್ಕಪಕ್ಕದ ಮನೆಯವರು ಹಾಗೂ ಪೊಲೀಸರು ವಿನಂತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್‌ ಮೈದಾನದಲ್ಲಿ ಸಿಗುತ್ತೇನೆ ಎಂದರು.

ಇನ್ನು ಈ ಬಾರಿಯ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಸುದೀಪ್‌ ನಡೆಸಿಕೊಡುವುದು ಅನುಮಾನ ಎನ್ನುವ ಊಹಾಪೋಹದ ಬಗ್ಗೆ ಮಾತನಾಡಿದ ಅವರು, ಬಿಗ್‌ಬಾಸ್‌ ಹೊಸ ಆವೃತ್ತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕಾರ್ಯಕ್ರಮ ನಡೆಸಿಕೊಡುವಲ್ಲಿ ನನ್ನ ಭಾಗದಿಂದ ಹೆಚ್ಚು ಪ್ರಯತ್ನವಿದೆ. ಶೋ ಮಾಡಲು ಆಸಕ್ತಿಯೂ ಇದೆ. ಆದರೆ ಕೆಲವೊಮ್ಮೆ ನಾವು ಮುಂದುವರಿಯಬೇಕಾಗುತ್ತದೆ. ಅವರು ಹೊಸ ಮುಖ ಹುಡುಕಲಿ ಎಂದು ವೈಯಕ್ತಿಕವಾಗಿ ಬಯಸುತ್ತೇನೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

9 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

10 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

11 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

11 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

11 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

19 hours ago