ಬೆಂಗಳೂರು: ಸೆಪ್ಟೆಂಬರ್.2ರಂದು ನಟ ಸುದೀಪ್ ಅವರಿಗೆ 51ನೇ ಜನ್ಮದಿನದ ಸಂಭ್ರಮ. ಈ ವರ್ಷ ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲು ಸುದೀಪ್ ನಿರ್ಧಾರ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್ ಅವರು, ನನ್ನ ಮನೆಯ ಬಳಿ ಜನ್ಮದಿನದ ಆಚರಣೆಗೆ ಅವಕಾಶ ಇಲ್ಲ. ಈ ವರ್ಷ ಎಂಇಎಸ್ ಮೈದಾನದಲ್ಲಿ ಬೆಳಿಗ್ಗೆ 11.30ರವರೆಗೆ ಸುದೀಪ್ ಇರಲಿದ್ದಾರೆ.
ವರ್ಷಗಳು ಉರುಳುತ್ತಿದ್ದಂತೆ ಅಭಿಮಾನಿಗಳ ಸಂಖ್ಯೆಯೂ ಕೂಡ ಜಾಸ್ತಿಯಾಗುತ್ತಿದೆ. ಕಳೆದ ವರ್ಷದ ಸಂಭ್ರಮಾಚರಣೆ ವೇಳೆ ಸ್ವಲ್ಪ ಗೊಂದಲವಾಯ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಮನೆಯ ಬಳಿ ಹುಟ್ಟುಹಬ್ಬ ಆಚರಿಸದಂತೆ ಅಕ್ಕಪಕ್ಕದ ಮನೆಯವರು ಹಾಗೂ ಪೊಲೀಸರು ವಿನಂತಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರದ ಎಂಇಎಸ್ ಮೈದಾನದಲ್ಲಿ ಸಿಗುತ್ತೇನೆ ಎಂದರು.
ಇನ್ನು ಈ ಬಾರಿಯ ಬಿಗ್ಬಾಸ್ ಕಾರ್ಯಕ್ರಮವನ್ನು ಸುದೀಪ್ ನಡೆಸಿಕೊಡುವುದು ಅನುಮಾನ ಎನ್ನುವ ಊಹಾಪೋಹದ ಬಗ್ಗೆ ಮಾತನಾಡಿದ ಅವರು, ಬಿಗ್ಬಾಸ್ ಹೊಸ ಆವೃತ್ತಿಯ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಕಾರ್ಯಕ್ರಮ ನಡೆಸಿಕೊಡುವಲ್ಲಿ ನನ್ನ ಭಾಗದಿಂದ ಹೆಚ್ಚು ಪ್ರಯತ್ನವಿದೆ. ಶೋ ಮಾಡಲು ಆಸಕ್ತಿಯೂ ಇದೆ. ಆದರೆ ಕೆಲವೊಮ್ಮೆ ನಾವು ಮುಂದುವರಿಯಬೇಕಾಗುತ್ತದೆ. ಅವರು ಹೊಸ ಮುಖ ಹುಡುಕಲಿ ಎಂದು ವೈಯಕ್ತಿಕವಾಗಿ ಬಯಸುತ್ತೇನೆ ಎಂದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…