ಮನರಂಜನೆ

ಈ ವಾರ ಮತ್ತೆ ‘ಹೆಬ್ಬುಲಿ’ಯಾಗಿ ಘರ್ಜಿಸಲಿದ್ದಾರೆ ಸುದೀಪ್‍

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್‍ ಹೆಚ್ಚಾಗಿರುವುದರಿಂದ ನಿರ್ಮಾಪಕರು ಮತ್ತು ನಿರ್ದೇಶಕರ ನಡುವೆ ಸಮಸ್ಯೆ ತಲೆದೋರಿದೆ ಮತ್ತು ಬಾಕಿ ಇರುವ ಚಿತ್ರೀಕರಣವನ್ನು ಎಲ್ಲಾದರೂ ದುಡ್ಡು ಹೊಂದಿಸಿ ಚಿತ್ರ ಮುಂದುವರೆಸುವುದಕ್ಕೆ ನಿರ್ಮಾಪಕರು, ನಿರ್ದೇಶಕರಿಗೆ ತಾಕೀತು ಮಾಡಿದ್ದಾರೆ ಎಂದೆಲ್ಲಾ ಮಾತುಗಳು ಕೇಳಿಬರುತ್ತಿವೆ.

ಕಾರಣ ಏನಾದರೂ ಇರಲಿ, ‘ಮ್ಯಾಕ್ಸ್’ ಸದ್ಯಕ್ಕೆ ಬಿಡುಗಡೆಯಾಗುವುದು ಸಂಶಯ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಚಿತ್ರ ಬಿಡುಗಡೆಗೆ ಇನ್ನೂ ಮೂರ್ನಾಲ್ಕು ತಿಂಗಳುಗಳು ಬೇಕು ಎಂಬ ಮಾತಿದೆ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ (ಆಗಸ್ಟ್ 02) ಮರುಬಿಡುಗಡೆಯಾಗುತ್ತಿದೆ.

ಇತ್ತೀಚಿನ ತಿಂಗಳುಗಳಲ್ಲಿ ಪುನೀತ್‍ ರಾಜಕುಮಾರ್, ದರ್ಶನ್‍, ಧ್ರುವ ಸರ್ಜಾ, ಉಪೇಂದ್ರ, ಯಶ್‍ ಮುಂತಾದವರ ಚಿತ್ರಗಳು ಮರುಬಿಡುಗಡೆಯಾಗಿವೆ. ಆದರೆ, ಸುದೀಪ್‍ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ ಮತ್ತೊಮ್ಮೆ ತೆರೆಗೆ ಬರುತ್ತಿದೆ.

2017ರಲ್ಲಿ ಬಿಡುಗಡೆಯಾದ ‘ಹೆಬ್ಬುಲಿ’ ಚಿತ್ರದಲ್ಲಿ ಸುದೀಪ್‍ ಯೋಧನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ರವಿಚಂದ್ರನ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಯೋಧನೊಬ್ಬ ತನ್ನ ಅಣ್ಣನ ಸಾವಿಗೆ ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬ ಕಥೆ ಈ ಚಿತ್ರದಲ್ಲಿತ್ತು. ಜೊತೆಗೆ ವೈದ್ಯಕೀಯ ಲೋಕದ ಮಾಫಿಯಾ ಬಗ್ಗೆಯೂ ಈ ಚಿತ್ರದಲ್ಲಿ ಬೆಳಕು ಚೆಲ್ಲಲಾಗಿತ್ತು. ಈ ಚಿತ್ರ ಯಶಸ್ವಿಯಾಗಿ ಹಿಂದಿ ಮತ್ತು ತಮಿಳಿಗೂ ಡಬ್‍ ಆಗಿ ಬಿಡುಗಡೆಯಾಗಿತ್ತು.

‘ಹೆಬ್ಬುಲಿ’ ಚಿತ್ರವನ್ನು ಎಸ್‍. ಕೃಷ್ಣ ನಿರ್ದೇಶಿಸಿದರೆ, ರಘುನಾಥ್‍ ಮತ್ತು ಉಮಾಪತಿ ಶ್ರೀನಿವಾಸ ಗೌಡ ಜೊತೆಯಾಗಿ ನಿರ್ಮಿಸಿದ್ದರು. ಚಿತ್ರದಲ್ಲಿ ಸುದೀಪ್‍, ರವಿಚಂದ್ರನ್, ಅಮಲಾ ಪಾಲ್‍, ಪಿ. ರವಿಶಂಕರ್, ಕಬೀರ್ ದುಹಾನ್ ಸಿಂಗ್, ರವಿಕಿಶನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಚಿತ್ರ 2017ರ ಶಿವರಾತ್ರಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಈಗ ಮರುಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ಸಿಗುತ್ತದೆ ಎಂದು ನೋಡಬೇಕಿದೆ.

ಭೂಮಿಕಾ

Recent Posts

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

1 hour ago

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

1 hour ago

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…

1 hour ago

ರಾಜ್ಯದಲ್ಲಿ ಇಂದು ಸಹ ಗುಡುಗು ಸಹಿತ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

2 hours ago

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…

2 hours ago

ಬಾಂಗ್ಲಾ ಮಾಜಿ ಸ್ಪೀಕರ್‌ ಶಿರಿನ್‌ ಶರ್ಮಿನ್‌ ಚೌಧರಿ ಬಂಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು…

2 hours ago