ಮನರಂಜನೆ

ಈ ವಾರ ಮತ್ತೆ ‘ಹೆಬ್ಬುಲಿ’ಯಾಗಿ ಘರ್ಜಿಸಲಿದ್ದಾರೆ ಸುದೀಪ್‍

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್‍ ಹೆಚ್ಚಾಗಿರುವುದರಿಂದ ನಿರ್ಮಾಪಕರು ಮತ್ತು ನಿರ್ದೇಶಕರ ನಡುವೆ ಸಮಸ್ಯೆ ತಲೆದೋರಿದೆ ಮತ್ತು ಬಾಕಿ ಇರುವ ಚಿತ್ರೀಕರಣವನ್ನು ಎಲ್ಲಾದರೂ ದುಡ್ಡು ಹೊಂದಿಸಿ ಚಿತ್ರ ಮುಂದುವರೆಸುವುದಕ್ಕೆ ನಿರ್ಮಾಪಕರು, ನಿರ್ದೇಶಕರಿಗೆ ತಾಕೀತು ಮಾಡಿದ್ದಾರೆ ಎಂದೆಲ್ಲಾ ಮಾತುಗಳು ಕೇಳಿಬರುತ್ತಿವೆ.

ಕಾರಣ ಏನಾದರೂ ಇರಲಿ, ‘ಮ್ಯಾಕ್ಸ್’ ಸದ್ಯಕ್ಕೆ ಬಿಡುಗಡೆಯಾಗುವುದು ಸಂಶಯ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಚಿತ್ರ ಬಿಡುಗಡೆಗೆ ಇನ್ನೂ ಮೂರ್ನಾಲ್ಕು ತಿಂಗಳುಗಳು ಬೇಕು ಎಂಬ ಮಾತಿದೆ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ (ಆಗಸ್ಟ್ 02) ಮರುಬಿಡುಗಡೆಯಾಗುತ್ತಿದೆ.

ಇತ್ತೀಚಿನ ತಿಂಗಳುಗಳಲ್ಲಿ ಪುನೀತ್‍ ರಾಜಕುಮಾರ್, ದರ್ಶನ್‍, ಧ್ರುವ ಸರ್ಜಾ, ಉಪೇಂದ್ರ, ಯಶ್‍ ಮುಂತಾದವರ ಚಿತ್ರಗಳು ಮರುಬಿಡುಗಡೆಯಾಗಿವೆ. ಆದರೆ, ಸುದೀಪ್‍ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ ಮತ್ತೊಮ್ಮೆ ತೆರೆಗೆ ಬರುತ್ತಿದೆ.

2017ರಲ್ಲಿ ಬಿಡುಗಡೆಯಾದ ‘ಹೆಬ್ಬುಲಿ’ ಚಿತ್ರದಲ್ಲಿ ಸುದೀಪ್‍ ಯೋಧನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ರವಿಚಂದ್ರನ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಯೋಧನೊಬ್ಬ ತನ್ನ ಅಣ್ಣನ ಸಾವಿಗೆ ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬ ಕಥೆ ಈ ಚಿತ್ರದಲ್ಲಿತ್ತು. ಜೊತೆಗೆ ವೈದ್ಯಕೀಯ ಲೋಕದ ಮಾಫಿಯಾ ಬಗ್ಗೆಯೂ ಈ ಚಿತ್ರದಲ್ಲಿ ಬೆಳಕು ಚೆಲ್ಲಲಾಗಿತ್ತು. ಈ ಚಿತ್ರ ಯಶಸ್ವಿಯಾಗಿ ಹಿಂದಿ ಮತ್ತು ತಮಿಳಿಗೂ ಡಬ್‍ ಆಗಿ ಬಿಡುಗಡೆಯಾಗಿತ್ತು.

‘ಹೆಬ್ಬುಲಿ’ ಚಿತ್ರವನ್ನು ಎಸ್‍. ಕೃಷ್ಣ ನಿರ್ದೇಶಿಸಿದರೆ, ರಘುನಾಥ್‍ ಮತ್ತು ಉಮಾಪತಿ ಶ್ರೀನಿವಾಸ ಗೌಡ ಜೊತೆಯಾಗಿ ನಿರ್ಮಿಸಿದ್ದರು. ಚಿತ್ರದಲ್ಲಿ ಸುದೀಪ್‍, ರವಿಚಂದ್ರನ್, ಅಮಲಾ ಪಾಲ್‍, ಪಿ. ರವಿಶಂಕರ್, ಕಬೀರ್ ದುಹಾನ್ ಸಿಂಗ್, ರವಿಕಿಶನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಚಿತ್ರ 2017ರ ಶಿವರಾತ್ರಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಈಗ ಮರುಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ಸಿಗುತ್ತದೆ ಎಂದು ನೋಡಬೇಕಿದೆ.

ಭೂಮಿಕಾ

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

3 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

3 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

4 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

4 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

5 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

6 hours ago