ಮನರಂಜನೆ

ಈ ವಾರ ಮತ್ತೆ ‘ಹೆಬ್ಬುಲಿ’ಯಾಗಿ ಘರ್ಜಿಸಲಿದ್ದಾರೆ ಸುದೀಪ್‍

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್‍ ಹೆಚ್ಚಾಗಿರುವುದರಿಂದ ನಿರ್ಮಾಪಕರು ಮತ್ತು ನಿರ್ದೇಶಕರ ನಡುವೆ ಸಮಸ್ಯೆ ತಲೆದೋರಿದೆ ಮತ್ತು ಬಾಕಿ ಇರುವ ಚಿತ್ರೀಕರಣವನ್ನು ಎಲ್ಲಾದರೂ ದುಡ್ಡು ಹೊಂದಿಸಿ ಚಿತ್ರ ಮುಂದುವರೆಸುವುದಕ್ಕೆ ನಿರ್ಮಾಪಕರು, ನಿರ್ದೇಶಕರಿಗೆ ತಾಕೀತು ಮಾಡಿದ್ದಾರೆ ಎಂದೆಲ್ಲಾ ಮಾತುಗಳು ಕೇಳಿಬರುತ್ತಿವೆ.

ಕಾರಣ ಏನಾದರೂ ಇರಲಿ, ‘ಮ್ಯಾಕ್ಸ್’ ಸದ್ಯಕ್ಕೆ ಬಿಡುಗಡೆಯಾಗುವುದು ಸಂಶಯ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಚಿತ್ರ ಬಿಡುಗಡೆಗೆ ಇನ್ನೂ ಮೂರ್ನಾಲ್ಕು ತಿಂಗಳುಗಳು ಬೇಕು ಎಂಬ ಮಾತಿದೆ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ (ಆಗಸ್ಟ್ 02) ಮರುಬಿಡುಗಡೆಯಾಗುತ್ತಿದೆ.

ಇತ್ತೀಚಿನ ತಿಂಗಳುಗಳಲ್ಲಿ ಪುನೀತ್‍ ರಾಜಕುಮಾರ್, ದರ್ಶನ್‍, ಧ್ರುವ ಸರ್ಜಾ, ಉಪೇಂದ್ರ, ಯಶ್‍ ಮುಂತಾದವರ ಚಿತ್ರಗಳು ಮರುಬಿಡುಗಡೆಯಾಗಿವೆ. ಆದರೆ, ಸುದೀಪ್‍ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ ಮತ್ತೊಮ್ಮೆ ತೆರೆಗೆ ಬರುತ್ತಿದೆ.

2017ರಲ್ಲಿ ಬಿಡುಗಡೆಯಾದ ‘ಹೆಬ್ಬುಲಿ’ ಚಿತ್ರದಲ್ಲಿ ಸುದೀಪ್‍ ಯೋಧನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ರವಿಚಂದ್ರನ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಯೋಧನೊಬ್ಬ ತನ್ನ ಅಣ್ಣನ ಸಾವಿಗೆ ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬ ಕಥೆ ಈ ಚಿತ್ರದಲ್ಲಿತ್ತು. ಜೊತೆಗೆ ವೈದ್ಯಕೀಯ ಲೋಕದ ಮಾಫಿಯಾ ಬಗ್ಗೆಯೂ ಈ ಚಿತ್ರದಲ್ಲಿ ಬೆಳಕು ಚೆಲ್ಲಲಾಗಿತ್ತು. ಈ ಚಿತ್ರ ಯಶಸ್ವಿಯಾಗಿ ಹಿಂದಿ ಮತ್ತು ತಮಿಳಿಗೂ ಡಬ್‍ ಆಗಿ ಬಿಡುಗಡೆಯಾಗಿತ್ತು.

‘ಹೆಬ್ಬುಲಿ’ ಚಿತ್ರವನ್ನು ಎಸ್‍. ಕೃಷ್ಣ ನಿರ್ದೇಶಿಸಿದರೆ, ರಘುನಾಥ್‍ ಮತ್ತು ಉಮಾಪತಿ ಶ್ರೀನಿವಾಸ ಗೌಡ ಜೊತೆಯಾಗಿ ನಿರ್ಮಿಸಿದ್ದರು. ಚಿತ್ರದಲ್ಲಿ ಸುದೀಪ್‍, ರವಿಚಂದ್ರನ್, ಅಮಲಾ ಪಾಲ್‍, ಪಿ. ರವಿಶಂಕರ್, ಕಬೀರ್ ದುಹಾನ್ ಸಿಂಗ್, ರವಿಕಿಶನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಚಿತ್ರ 2017ರ ಶಿವರಾತ್ರಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಈಗ ಮರುಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ಸಿಗುತ್ತದೆ ಎಂದು ನೋಡಬೇಕಿದೆ.

ಭೂಮಿಕಾ

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago