ಮನರಂಜನೆ

ಈ ವಾರ ಮತ್ತೆ ‘ಹೆಬ್ಬುಲಿ’ಯಾಗಿ ಘರ್ಜಿಸಲಿದ್ದಾರೆ ಸುದೀಪ್‍

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರದ ಬಿಡುಗಡೆ ಯಾವಾಗ ಎಂದು ಅವರ ಅಭಿಮಾನಿಗಳು ತಲೆ ಕೆಡಿಸಕೊಂಡು ಕುಳಿತಿದ್ದಾರೆ. ಆದರೆ, ಚಿತ್ರತಂಡದಿಂದ ಯಾವೊಂದು ಮಾಹಿತಿ ಇಲ್ಲ. ಮೇಲ್ನೋಟಕ್ಕೆ ಚಿತ್ರದ ಚಿತ್ರೀಕರಣ ಮುಗಿದಿದೆ ಎಂದು ಹೇಳಲಾಗುತ್ತಿದೆಯಾದರೂ, ಅಲ್ಲೂ ಹಲವು ಗೊಂದಲಗಳಿವೆ. ಪ್ರಮುಖವಾಗಿ ಚಿತ್ರದ ಬಜೆಟ್‍ ಹೆಚ್ಚಾಗಿರುವುದರಿಂದ ನಿರ್ಮಾಪಕರು ಮತ್ತು ನಿರ್ದೇಶಕರ ನಡುವೆ ಸಮಸ್ಯೆ ತಲೆದೋರಿದೆ ಮತ್ತು ಬಾಕಿ ಇರುವ ಚಿತ್ರೀಕರಣವನ್ನು ಎಲ್ಲಾದರೂ ದುಡ್ಡು ಹೊಂದಿಸಿ ಚಿತ್ರ ಮುಂದುವರೆಸುವುದಕ್ಕೆ ನಿರ್ಮಾಪಕರು, ನಿರ್ದೇಶಕರಿಗೆ ತಾಕೀತು ಮಾಡಿದ್ದಾರೆ ಎಂದೆಲ್ಲಾ ಮಾತುಗಳು ಕೇಳಿಬರುತ್ತಿವೆ.

ಕಾರಣ ಏನಾದರೂ ಇರಲಿ, ‘ಮ್ಯಾಕ್ಸ್’ ಸದ್ಯಕ್ಕೆ ಬಿಡುಗಡೆಯಾಗುವುದು ಸಂಶಯ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ಚಿತ್ರ ಬಿಡುಗಡೆಗೆ ಇನ್ನೂ ಮೂರ್ನಾಲ್ಕು ತಿಂಗಳುಗಳು ಬೇಕು ಎಂಬ ಮಾತಿದೆ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ (ಆಗಸ್ಟ್ 02) ಮರುಬಿಡುಗಡೆಯಾಗುತ್ತಿದೆ.

ಇತ್ತೀಚಿನ ತಿಂಗಳುಗಳಲ್ಲಿ ಪುನೀತ್‍ ರಾಜಕುಮಾರ್, ದರ್ಶನ್‍, ಧ್ರುವ ಸರ್ಜಾ, ಉಪೇಂದ್ರ, ಯಶ್‍ ಮುಂತಾದವರ ಚಿತ್ರಗಳು ಮರುಬಿಡುಗಡೆಯಾಗಿವೆ. ಆದರೆ, ಸುದೀಪ್‍ ಅಭಿನಯದ ಯಾವೊಂದು ಚಿತ್ರ ಸಹ ಬಿಡುಗಡೆಯಾಗಿರಲಿಲ್ಲ. ಹೀಗಿರುವಾಗಲೇ, ಸುದೀಪ್‍ ಅಭಿನಯದ ‘ಹೆಬ್ಬುಲಿ’ ಚಿತ್ರವು ಈ ವಾರ ಮತ್ತೊಮ್ಮೆ ತೆರೆಗೆ ಬರುತ್ತಿದೆ.

2017ರಲ್ಲಿ ಬಿಡುಗಡೆಯಾದ ‘ಹೆಬ್ಬುಲಿ’ ಚಿತ್ರದಲ್ಲಿ ಸುದೀಪ್‍ ಯೋಧನಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ರವಿಚಂದ್ರನ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಯೋಧನೊಬ್ಬ ತನ್ನ ಅಣ್ಣನ ಸಾವಿಗೆ ಹೇಗೆ ಸೇಡು ತೀರಿಸಿಕೊಳ್ಳುತ್ತಾನೆ ಎಂಬ ಕಥೆ ಈ ಚಿತ್ರದಲ್ಲಿತ್ತು. ಜೊತೆಗೆ ವೈದ್ಯಕೀಯ ಲೋಕದ ಮಾಫಿಯಾ ಬಗ್ಗೆಯೂ ಈ ಚಿತ್ರದಲ್ಲಿ ಬೆಳಕು ಚೆಲ್ಲಲಾಗಿತ್ತು. ಈ ಚಿತ್ರ ಯಶಸ್ವಿಯಾಗಿ ಹಿಂದಿ ಮತ್ತು ತಮಿಳಿಗೂ ಡಬ್‍ ಆಗಿ ಬಿಡುಗಡೆಯಾಗಿತ್ತು.

‘ಹೆಬ್ಬುಲಿ’ ಚಿತ್ರವನ್ನು ಎಸ್‍. ಕೃಷ್ಣ ನಿರ್ದೇಶಿಸಿದರೆ, ರಘುನಾಥ್‍ ಮತ್ತು ಉಮಾಪತಿ ಶ್ರೀನಿವಾಸ ಗೌಡ ಜೊತೆಯಾಗಿ ನಿರ್ಮಿಸಿದ್ದರು. ಚಿತ್ರದಲ್ಲಿ ಸುದೀಪ್‍, ರವಿಚಂದ್ರನ್, ಅಮಲಾ ಪಾಲ್‍, ಪಿ. ರವಿಶಂಕರ್, ಕಬೀರ್ ದುಹಾನ್ ಸಿಂಗ್, ರವಿಕಿಶನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ಚಿತ್ರ 2017ರ ಶಿವರಾತ್ರಿಗೆ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಈಗ ಮರುಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ಯಾವ ರೀತಿ ಪ್ರತಿಕ್ರಿಯೆ ಸಿಗುತ್ತದೆ ಎಂದು ನೋಡಬೇಕಿದೆ.

ಭೂಮಿಕಾ

Recent Posts

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

12 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

14 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

17 hours ago

ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ: ನಾಡದೇವಿಗೆ ಮಹಾಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಮಹಾಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಇಡೀ…

21 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

1 day ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

1 day ago