ಬೆಂಗಳೂರು: ಕೊಲೆ ಯತ್ನದ ಕೇಸ್ನಲ್ಲಿ ಜೋಡಿಹಕ್ಕಿ ಧಾರವಾಹಿ ಖ್ಯಾತಿಯ ನಟ ತಾಂಡವ್ ರಾಮ್ರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಸಿನಿಮಾ ನಿಂತಿದ್ದಕ್ಕೆ ಮುಗಿಲ್ ಪೇಟೆ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ತಾಂಡವ್ರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಗಿಲ್ ಪೇಟೆ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು. ಕಾರಣಾಂತರಗಳಿಂದ ಮುಗಿಲ್ ಪೇಟೆ ಸಿನಿಮಾದ ಶೂಟಿಂಗ್ನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಚೇರಿಯೊಂದರಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ನಿರ್ದೇಶಕ ಹಾಗೂ ತಾಂಡವ್ ರಾಮ್ ನಡುವೆ ಮಾತುಕತೆ ನಡೆಯುತ್ತಿತ್ತು. ಈ ವೇಳೆ ತಾಂಡವ್ಗೂ ಚಿತ್ರದ ನಿರ್ದೇಶಕ ಭರತ್ಗೂ ವಾಗ್ವಾದ ನಡೆದಿದ್ದು, ಆಕ್ರೋಶಗೊಂಡ ತಾಂಡವ್ ಗನ್ ತೆಗೆದು ಭರತ್ ಮೇಲೆ ಗುಂಡು ಹಾರಿಸಿದ್ದಾರೆ.
ಅದೃಷ್ಟವಶಾತ್ ಗುಂಡು ಡೈರೆಕ್ಟರ್ ಭರತ್ಗೆ ತಗುಲದೇ ಗೋಡೆಗೆ ಬಿದ್ದಿದೆ. ಇದೀಗ ಭರತ್ ನೀಡಿದ ದೂರಿನ ಮೇರೆಗೆ ನಟ ತಾಂಡವ್ರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಹೆಚ್ಚಿನ ಸತ್ಯಾಸತ್ಯತೆ ಹೊರಬರಬೇಕಾಗಿದೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…