ಬೆಂಗಳೂರು: ಕೊಲೆ ಯತ್ನದ ಕೇಸ್ನಲ್ಲಿ ಜೋಡಿಹಕ್ಕಿ ಧಾರವಾಹಿ ಖ್ಯಾತಿಯ ನಟ ತಾಂಡವ್ ರಾಮ್ರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಸಿನಿಮಾ ನಿಂತಿದ್ದಕ್ಕೆ ಮುಗಿಲ್ ಪೇಟೆ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದರು. ಈ ಹಿನ್ನೆಲೆಯಲ್ಲಿ ತಾಂಡವ್ರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಗಿಲ್ ಪೇಟೆ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು. ಕಾರಣಾಂತರಗಳಿಂದ ಮುಗಿಲ್ ಪೇಟೆ ಸಿನಿಮಾದ ಶೂಟಿಂಗ್ನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಚೇರಿಯೊಂದರಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ನಿರ್ದೇಶಕ ಹಾಗೂ ತಾಂಡವ್ ರಾಮ್ ನಡುವೆ ಮಾತುಕತೆ ನಡೆಯುತ್ತಿತ್ತು. ಈ ವೇಳೆ ತಾಂಡವ್ಗೂ ಚಿತ್ರದ ನಿರ್ದೇಶಕ ಭರತ್ಗೂ ವಾಗ್ವಾದ ನಡೆದಿದ್ದು, ಆಕ್ರೋಶಗೊಂಡ ತಾಂಡವ್ ಗನ್ ತೆಗೆದು ಭರತ್ ಮೇಲೆ ಗುಂಡು ಹಾರಿಸಿದ್ದಾರೆ.
ಅದೃಷ್ಟವಶಾತ್ ಗುಂಡು ಡೈರೆಕ್ಟರ್ ಭರತ್ಗೆ ತಗುಲದೇ ಗೋಡೆಗೆ ಬಿದ್ದಿದೆ. ಇದೀಗ ಭರತ್ ನೀಡಿದ ದೂರಿನ ಮೇರೆಗೆ ನಟ ತಾಂಡವ್ರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಬಳಿಕ ಹೆಚ್ಚಿನ ಸತ್ಯಾಸತ್ಯತೆ ಹೊರಬರಬೇಕಾಗಿದೆ.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…