ಮನರಂಜನೆ

‘ಸೂರಪ್ಪ’ ಬಾಬು ನಿರ್ಮಾಣದಲ್ಲಿ ಉಪೇಂದ್ರ ಹೊಸ ಚಿತ್ರ; ಏ.30ಕ್ಕೆ ಹೆಸರು ಘೋಷಣೆ

‘ಕೋಟಿಗೊಬ್ಬ 3’ ಚಿತ್ರದ ಸೋಲು, ನಷ್ಟ ಮತ್ತು ವಿವಾದಗಳಿಂದ, ನಿರ್ಮಾಣದಿಂದ ಕೆಲವು ಸಮಯ ದೂರವೇ ಇದ್ದ ನಿರ್ಮಾಪಕ ‘ಸೂರಪ್ಪ’ ಬಾಬು, ಆ ನಂತರ ಶಿವರಾಜಕುಮಾರ್‍ ಮತ್ತು ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದರು. ದರ್ಶನ್‍ಗೂ ಹೊಸ ಚಿತ್ರವೊಂದಕ್ಕೆ ಅಡ್ವಾನ್ಸ್ ಕೊಟ್ಟಿದ್ದರು. ಆದರೆ, ಆ ಎರಡೂ ಚಿತ್ರಗಳು ಕಾರಣಾಂತರಗಳಿಂದ ಮುಂದುವರೆಯಲೇ ಇಲ್ಲ. ಶಿವಣ್ಣ-ಗಣೇಶ್‍ ಅಭಿನಯದ ಚಿತ್ರದ ಸುದ್ದಿಯೇ ಇಲ್ಲ. ಹಾಗೆಯೇ, ಬಾಬುಗೆ ಅಡ್ವಾನ್ಸ್ ವಾಪಸ್ಸು ಕೊಟ್ಟಿದ್ದರ ಕುರಿತು ದರ್ಶನ್‍, ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದರು.

‘ಸೂರಪ್ಪ’ ಬಾಬು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಲೇ ಇಲ್ಲ. ಹೀಗಿರುವಾಗಲೇ ಅವರು ಹೊಸದೊಂದು ಚಿತ್ರವನ್ನು ನಿರ್ಮಿಸುತ್ತಿರುವ ಸುದ್ದಿ ಇದೆ. ಈ ಚಿತ್ರವನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡಿದರೆ, ಉಪೇಂದ್ರ ಅದರಲ್ಲಿ ನಾಯಕನಾಗಿ ನಟಿಸಲಿದ್ದಾರೆ.

ಕನ್ನಡ ಚಿತ್ರರಂಗ ಕಂಡ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ಉಪೇಂದ್ರ ಮತ್ತು ನಾಗಣ್ಣ ಅವರ ಜೋಡಿ ಸಹ ಒಂದು. ಈ ಹಿಂದೆ ‘ಗೌರಮ್ಮ’, ‘ಕುಟುಂಬ’, ‘ಓಂಕಾರ’ ಮತ್ತು ‘ದುಬೈ ಬಾಬು’ ಚಿತ್ರಗಳನ್ನು ಈ ಜೋಡಿ ಮಾಡಿತ್ತು. ಉಪೇಂದ್ರ ಅಭಿನಯದಲ್ಲಿ ಹಿರಿಯ ನಿರ್ದೇಶಕ ನಾಗಣ್ಣ, ಕನಕದಾಸರ ಕುರಿತಾದ ಚಿತ್ರವೊಂದನ್ನು ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಕೆಲವು ವರ್ಷಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಮುಂದುವರೆಯಲಿಲ್ಲ.

ಈಗ ನಾಗಣ್ಣ ಮತ್ತು ಉಪೇಂದ್ರರ ಜೊತೆಯಾಟದಲ್ಲಿ ಹೊಸ ಚಿತ್ರ ನಿರ್ಮಿಸುತ್ತಿದ್ದಾರೆ ಬಾಬು. ಅಲ್ಲಿಯವರೆಗೂ ಚಿತ್ರರಂಗದಲ್ಲಿ ಬರಹಗಾರರಾಗಿ, ಸಹನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಉಪೇಂದ್ರ ಅವರನ್ನು‘ತರ್ಲೆ ನನ್ಮಗ’ ಚಿತ್ರದ ಮೂಲಕ ನಿರ್ದೇಶಕರನ್ನಾಗಿ ಪರಿಚಯಿಸಿದ್ದೇ ಅವರು. ಆ ನಂತರ ಉಪೇಂದ್ರ ಜೊತೆಗೆ ಅವರು ಚಿತ್ರ ಮಾಡಿರಲಿಲ್ಲ.

ಇನ್ನು, ನಾಗಣ್ಣ ನಿರ್ದೇಶನದಲ್ಲಿ ‘ಸೂರಪ್ಪ’, ‘ಕೋಟಿಗೊಬ್ಬ’ ಮತ್ತು ‘ಬಂಧು-ಬಳಗ’ ಚಿತ್ರಗಳನ್ನು ಬಾಬು ನಿರ್ಮಿಸಿದ್ದರು. ಮೊದಲೆರಡು ಚಿತ್ರಗಳಲ್ಲಿ ವಿಷ್ಣುವರ್ಧನ್‍ ನಟಿಸಿದರೆ, ‘ಬಂಧು-ಬಳಗ’ ಚಿತ್ರದಲ್ಲಿ ಶಿವರಾಜಕುಮಾರ್‍ ನಟಿಸಿದ್ದರು. ಈಗ ಉಪೇಂದ್ರ ಅಭಿನಯದ ಹೊಸ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

ಈ ಹೊಸ ಚಿತ್ರದ ಶೀರ್ಷಿಕೆ ಏನು, ಯಾವಾಗ ಶುರು ಎಂಬ ಬಗ್ಗೆ ಚಿತ್ರತಂಡ ಇನ್ನಷ್ಟೇ ಹೊರಬೀಳಬೇಕಿದೆ. ಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ಏಪ್ರಿಲ್‍.30ರಂದು ಚಿತ್ರದ ಹೆಸರು ಅನಾವರಣವಾಗಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅನಗತ್ಯ ಸಿಸೇರಿಯನ್: ಆಸ್ಪತ್ರೆಗಳ ವಿರುದ್ಧ ಕ್ರಮ ಸ್ವಾಗತಾರ್ಹ

ಹೆರಿಗೆ ಸಮಯದಲ್ಲಿ ಅನಗತ್ಯವಾಗಿ ಸಿಸೇರಿಯನ್ ಮಾಡುವ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಕೆಪಿಎಂಇ ಅಧಿನಿಯಮ ಕಾಯ್ದೆ ಪ್ರಕಾರ ಕಾನೂನು ಕ್ರಮ…

5 mins ago

ಪಂಜು ಗಂಗೊಳ್ಳಿ ವಾರದ ಅಂಕಣ: ವಿಕಲಾಂಗರ ಬದುಕಿಗೆ ಚಲನೆ ನೀಡುವ ಸಂದೀಪ್ ತಲ್ವಾರ್

ಸ್ವಾವಲಂಬನೆಗೆ ಸಹಕಾರಿಯಾದ ನಿಯೋಬೋಲ್ಟ್ ಸ್ಕೂಟರ್ ಗಾಲಿಕುರ್ಚಿ 2010ರ ಆಗಸ್ಟ್ ತಿಂಗಳಿನಲ್ಲಿ ನಾಗ್ಪುರದ ನಿವಾಸಿ ನಿತೀನ್‌ರ ಜನ್ಮ ದಿನಾಚರಣೆಯ ಸಂಭ್ರಮ ಆಚರಿಸಲು…

43 mins ago

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

3 hours ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

3 hours ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

3 hours ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

3 hours ago