ಮನರಂಜನೆ

‘ಸೂರಪ್ಪ’ ಬಾಬು ನಿರ್ಮಾಣದಲ್ಲಿ ಉಪೇಂದ್ರ ಹೊಸ ಚಿತ್ರ; ಏ.30ಕ್ಕೆ ಹೆಸರು ಘೋಷಣೆ

‘ಕೋಟಿಗೊಬ್ಬ 3’ ಚಿತ್ರದ ಸೋಲು, ನಷ್ಟ ಮತ್ತು ವಿವಾದಗಳಿಂದ, ನಿರ್ಮಾಣದಿಂದ ಕೆಲವು ಸಮಯ ದೂರವೇ ಇದ್ದ ನಿರ್ಮಾಪಕ ‘ಸೂರಪ್ಪ’ ಬಾಬು, ಆ ನಂತರ ಶಿವರಾಜಕುಮಾರ್‍ ಮತ್ತು ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದರು. ದರ್ಶನ್‍ಗೂ ಹೊಸ ಚಿತ್ರವೊಂದಕ್ಕೆ ಅಡ್ವಾನ್ಸ್ ಕೊಟ್ಟಿದ್ದರು. ಆದರೆ, ಆ ಎರಡೂ ಚಿತ್ರಗಳು ಕಾರಣಾಂತರಗಳಿಂದ ಮುಂದುವರೆಯಲೇ ಇಲ್ಲ. ಶಿವಣ್ಣ-ಗಣೇಶ್‍ ಅಭಿನಯದ ಚಿತ್ರದ ಸುದ್ದಿಯೇ ಇಲ್ಲ. ಹಾಗೆಯೇ, ಬಾಬುಗೆ ಅಡ್ವಾನ್ಸ್ ವಾಪಸ್ಸು ಕೊಟ್ಟಿದ್ದರ ಕುರಿತು ದರ್ಶನ್‍, ಕೆಲವು ತಿಂಗಳುಗಳ ಹಿಂದೆ ಹೇಳಿಕೊಂಡಿದ್ದರು.

‘ಸೂರಪ್ಪ’ ಬಾಬು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆ ಚಿತ್ರರಂಗದ ವಲಯದಲ್ಲಿ ಕೇಳಿಬರುತ್ತಲೇ ಇಲ್ಲ. ಹೀಗಿರುವಾಗಲೇ ಅವರು ಹೊಸದೊಂದು ಚಿತ್ರವನ್ನು ನಿರ್ಮಿಸುತ್ತಿರುವ ಸುದ್ದಿ ಇದೆ. ಈ ಚಿತ್ರವನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡಿದರೆ, ಉಪೇಂದ್ರ ಅದರಲ್ಲಿ ನಾಯಕನಾಗಿ ನಟಿಸಲಿದ್ದಾರೆ.

ಕನ್ನಡ ಚಿತ್ರರಂಗ ಕಂಡ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ಉಪೇಂದ್ರ ಮತ್ತು ನಾಗಣ್ಣ ಅವರ ಜೋಡಿ ಸಹ ಒಂದು. ಈ ಹಿಂದೆ ‘ಗೌರಮ್ಮ’, ‘ಕುಟುಂಬ’, ‘ಓಂಕಾರ’ ಮತ್ತು ‘ದುಬೈ ಬಾಬು’ ಚಿತ್ರಗಳನ್ನು ಈ ಜೋಡಿ ಮಾಡಿತ್ತು. ಉಪೇಂದ್ರ ಅಭಿನಯದಲ್ಲಿ ಹಿರಿಯ ನಿರ್ದೇಶಕ ನಾಗಣ್ಣ, ಕನಕದಾಸರ ಕುರಿತಾದ ಚಿತ್ರವೊಂದನ್ನು ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಕೆಲವು ವರ್ಷಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಮುಂದುವರೆಯಲಿಲ್ಲ.

ಈಗ ನಾಗಣ್ಣ ಮತ್ತು ಉಪೇಂದ್ರರ ಜೊತೆಯಾಟದಲ್ಲಿ ಹೊಸ ಚಿತ್ರ ನಿರ್ಮಿಸುತ್ತಿದ್ದಾರೆ ಬಾಬು. ಅಲ್ಲಿಯವರೆಗೂ ಚಿತ್ರರಂಗದಲ್ಲಿ ಬರಹಗಾರರಾಗಿ, ಸಹನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಉಪೇಂದ್ರ ಅವರನ್ನು‘ತರ್ಲೆ ನನ್ಮಗ’ ಚಿತ್ರದ ಮೂಲಕ ನಿರ್ದೇಶಕರನ್ನಾಗಿ ಪರಿಚಯಿಸಿದ್ದೇ ಅವರು. ಆ ನಂತರ ಉಪೇಂದ್ರ ಜೊತೆಗೆ ಅವರು ಚಿತ್ರ ಮಾಡಿರಲಿಲ್ಲ.

ಇನ್ನು, ನಾಗಣ್ಣ ನಿರ್ದೇಶನದಲ್ಲಿ ‘ಸೂರಪ್ಪ’, ‘ಕೋಟಿಗೊಬ್ಬ’ ಮತ್ತು ‘ಬಂಧು-ಬಳಗ’ ಚಿತ್ರಗಳನ್ನು ಬಾಬು ನಿರ್ಮಿಸಿದ್ದರು. ಮೊದಲೆರಡು ಚಿತ್ರಗಳಲ್ಲಿ ವಿಷ್ಣುವರ್ಧನ್‍ ನಟಿಸಿದರೆ, ‘ಬಂಧು-ಬಳಗ’ ಚಿತ್ರದಲ್ಲಿ ಶಿವರಾಜಕುಮಾರ್‍ ನಟಿಸಿದ್ದರು. ಈಗ ಉಪೇಂದ್ರ ಅಭಿನಯದ ಹೊಸ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಸಜ್ಜಾಗುತ್ತಿದ್ದಾರೆ.

ಈ ಹೊಸ ಚಿತ್ರದ ಶೀರ್ಷಿಕೆ ಏನು, ಯಾವಾಗ ಶುರು ಎಂಬ ಬಗ್ಗೆ ಚಿತ್ರತಂಡ ಇನ್ನಷ್ಟೇ ಹೊರಬೀಳಬೇಕಿದೆ. ಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ಏಪ್ರಿಲ್‍.30ರಂದು ಚಿತ್ರದ ಹೆಸರು ಅನಾವರಣವಾಗಲಿದೆ.

ಆಂದೋಲನ ಡೆಸ್ಕ್

Recent Posts

ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕ್ರಮ: ಸಚಿವ ಸುಧಾಕರ್‌

ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌…

29 mins ago

ರಾಜ್ಯ ಸಂಚಾರ ಪೊಲೀಸರ ಆರೋಗ್ಯ ರಕ್ಷಣೆಗೆ ಕ್ರಮ: ಮಾಸ್ಕ್‌ ನೀರು, ನೆರಳಿನ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…

30 mins ago

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ…

50 mins ago

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು: 10ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…

1 hour ago

ಒಳಮೀಸಲಾತಿ ಹಂಚಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…

5 hours ago

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

6 hours ago