ಹೈದರಾಬಾದ್: ತ್ರಿನಯನಿ ಧಾರವಾಹಿ ಖ್ಯಾತಿಯ ನಟಿ ಪವಿತ್ರಾ ಜಯರಾಮ್ ಅವರು ಅಪಘಾತದಿಂದ ಮರಣಹೊಂದಿದ ಕೆಲವು ದಿನಗಳ ಬಳಿಕ ಅವರ ಗೆಳೆಯ ಚಂದು ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಕೆಲವು ದಿನಗಳ ಹಿಂದೆ ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್ ಅವರು ಕಾರು ಅಪಘಾತದಲ್ಲಿ ಮರಣ ಹೊಂದಿದ್ದರು. ಅಪಘಾತ ನಡೆದಾಗ ಸಹನಟ/ಗೆಳೆಯ ಚಂದು ಕೂಡಾ ಅವರೊಂದಿಗೆ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಇನ್ನು ಪವಿತ್ರಾ ಅವರ ಅಗಲಿಕೆಯಿಂದ ಚಂದು ದುಃಖಿತರಾಗಿದ್ದರು. ಇದರ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.
ಚಂದು ಅವರಿಗೆ 2015ರಲ್ಲಿ ತಮ್ಮ ಪ್ರಿಯತಮೆ ಜತೆ ಮದುವೆಯಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ನಟಿ ಪವಿತ್ರಾ ನಿಧನ ಬಳಿಕ ಮನೊಂದಿದ್ದ ಚಂದು ಹೈದರಾಬಾದ್ನ ಮಣಿಕೊಂಡದಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಮಾತ್ರ ಈವರೆಗೆ ಗೊತ್ತಾಗಿಲ್ಲ. ಈ ಸಂಬಂಧ ನಾರಸಿಂಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಲು ನಟಿ ಪವಿತ್ರಾ ಜಯರಾಮ್ ಅವರು ಬೆಂಗಳೂರಿಗೆ ಬಂದಿದ್ದರು. ಬಳಿಕ ಬೆಂಗಳೂರಿನಿಂದ ಹೈದರಾಬಾದ್ಗೆ ಹಿಂತಿರುಗುವಾಗ ರಸ್ತೆ ಅಪಘಾತ ಸಂಭವಿಸಿ ನಟಿ ಮರಣ ಹೊಂದಿದರು. ಅವರ ಜತೆಯಲ್ಲಿದ್ದ ನಟ/ಗೆಳೆಯ ಚಂದು ಅವರಿಗೂ ಗಾಯಗಳಾಗಿದ್ದವು. ಈ ನೋವು ಮಾಸುವ ಮುನ್ನವೇ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…