ಮನರಂಜನೆ

ನಟಿ ಪವಿತ್ರಾ ಜಯರಾಮ್‌ ಗೆಳೆಯ ಚಂದು ಆತ್ಮಹತ್ಯೆ

ಹೈದರಾಬಾದ್‌: ತ್ರಿನಯನಿ ಧಾರವಾಹಿ ಖ್ಯಾತಿಯ ನಟಿ ಪವಿತ್ರಾ ಜಯರಾಮ್‌ ಅವರು ಅಪಘಾತದಿಂದ ಮರಣಹೊಂದಿದ ಕೆಲವು ದಿನಗಳ ಬಳಿಕ ಅವರ ಗೆಳೆಯ ಚಂದು ಕೂಡಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಮಂಡ್ಯ ಮೂಲದ ನಟಿ ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮರಣ ಹೊಂದಿದ್ದರು. ಅಪಘಾತ ನಡೆದಾಗ ಸಹನಟ/ಗೆಳೆಯ ಚಂದು ಕೂಡಾ ಅವರೊಂದಿಗೆ ಇದ್ದರು. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಇನ್ನು ಪವಿತ್ರಾ ಅವರ ಅಗಲಿಕೆಯಿಂದ ಚಂದು ದುಃಖಿತರಾಗಿದ್ದರು. ಇದರ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಚಂದು ಅವರಿಗೆ 2015ರಲ್ಲಿ ತಮ್ಮ ಪ್ರಿಯತಮೆ ಜತೆ ಮದುವೆಯಾಗಿತ್ತು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. ನಟಿ ಪವಿತ್ರಾ ನಿಧನ ಬಳಿಕ ಮನೊಂದಿದ್ದ ಚಂದು ಹೈದರಾಬಾದ್‌ನ ಮಣಿಕೊಂಡದಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ಮಾತ್ರ ಈವರೆಗೆ ಗೊತ್ತಾಗಿಲ್ಲ. ಈ ಸಂಬಂಧ ನಾರಸಿಂಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಸಿನಿಮಾ ಒಂದಕ್ಕೆ ಸಹಿ ಹಾಕಲು ನಟಿ ಪವಿತ್ರಾ ಜಯರಾಮ್‌ ಅವರು ಬೆಂಗಳೂರಿಗೆ ಬಂದಿದ್ದರು. ಬಳಿಕ ಬೆಂಗಳೂರಿನಿಂದ ಹೈದರಾಬಾದ್‌ಗೆ ಹಿಂತಿರುಗುವಾಗ ರಸ್ತೆ ಅಪಘಾತ ಸಂಭವಿಸಿ ನಟಿ ಮರಣ ಹೊಂದಿದರು. ಅವರ ಜತೆಯಲ್ಲಿದ್ದ ನಟ/ಗೆಳೆಯ ಚಂದು ಅವರಿಗೂ ಗಾಯಗಳಾಗಿದ್ದವು. ಈ ನೋವು ಮಾಸುವ ಮುನ್ನವೇ ನಟ ಚಂದು ಆತ್ಮಹತ್ಯೆ ಮಾಡಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago