ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ಮಾಡಲು ಚಲನಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಅವರು ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ರಮ್ಯ ಅವರು ಇದೇ ಏ.೧೭ ಅಥವಾ ಏ.೨೦ ರಂದು ಮಂಡ್ಯದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಮಂಗಳವಾರ(ಏ.೧೦) ಹೇಳಿದರು.
ಒಕ್ಕಲಿಗರ ಭದ್ರಕೋಟೆಯಲ್ಲಿ ಪಾರುಪತ್ಯ ಸಾಧಿಸಲು ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಕೈ ನಾಯಕರ ಪ್ರವಾಸದ ಬಗ್ಗೆ ಕೈ ಶಾಸಕ ರವಿಕುಮಾರ್ ಮಾಹಿತಿ ನೀಡಿದರು.
ಮೈತ್ರಿ ಅಭ್ಯರ್ಥಿ ಎಚ್ಡಿಕೆ ಪರವಾಗಿ ಸುಮಲತಾ ಪ್ರಚಾರ ಸಂಬಂಧ ಕಳೆದ ಚುನಾವಣೆಯಲ್ಲಿ ದಾಯಾದಿಗಳಾಗಿದ್ದ ಅಕ್ಕ-ತಮ್ಮ ಈ ಚುನಾವಣೆಯಲ್ಲಿ ಒಂದಾಗಿದ್ದಾರೆ. ಅವರ ಬಗ್ಗೆ ನಾವು ಯಾಕೆ ಮಾತನಾಡೋದು. ಈಗ ತಮ್ಮನ ಪರ ಅಕ್ಕ ಇದ್ದಾರೆ. ಅವರ ಚುನಾವಣೆ ಅವರದು, ನಮ್ಮ ಚುನಾವಣೆ ನಮ್ಮದು ಎಂದು ವ್ಯಂಗ್ಯವಾಡಿದರು.
ಇನ್ನು ಅಂಬರೀಶಣ್ಣನ ಅಭಿಮಾನಿಗಳು ಕಾಂಗ್ರೆಸ್ ಪರ ಇದ್ದಾರೆ. ಅಂಬರೀಶ್ ಬದುಕಿರುವವರೆಗೂ ಕಾಂಗ್ರೆಸ್ ಪಕ್ಷದವರಾಗಿಯೇ ಇದ್ದರು. ಕಳೆದ ಚುನಾವಣೆಯಲ್ಲಿ ತಮ್ಮ, ಅಕ್ಕನಿಗೆ ಕೊಟ್ಟ ಕಾಟವನ್ನ ಅಂಬಿ ಅಭಿಮಾನಿಗಳು ಮರೆಯುತ್ತಾರಾ? ಅಂಬರೀಶ್ ಅಭಿಮಾನಿಗಳು ಕಾಂಗ್ರೆಸ್ ಪರ ಇದ್ದು, ಈ ಬಾರಿ ಸ್ಟಾರ್ ಚಂದ್ರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.
ಹೊಸದಿಲ್ಲಿ : ಮುಂಬರುವ ಏಪ್ರಿಲ್ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…