ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ಪ್ರಚಾರ ಮಾಡಲು ಚಲನಚಿತ್ರ ನಟಿ, ಮಾಜಿ ಸಂಸದೆ ರಮ್ಯಾ ಅವರು ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದಾರೆ. ರಮ್ಯ ಅವರು ಇದೇ ಏ.೧೭ ಅಥವಾ ಏ.೨೦ ರಂದು ಮಂಡ್ಯದ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಮಂಡ್ಯ ಶಾಸಕ ರವಿಕುಮಾರ್ ಗಣಿಗ ಮಂಗಳವಾರ(ಏ.೧೦) ಹೇಳಿದರು.
ಒಕ್ಕಲಿಗರ ಭದ್ರಕೋಟೆಯಲ್ಲಿ ಪಾರುಪತ್ಯ ಸಾಧಿಸಲು ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ಕೈ ನಾಯಕರ ಪ್ರವಾಸದ ಬಗ್ಗೆ ಕೈ ಶಾಸಕ ರವಿಕುಮಾರ್ ಮಾಹಿತಿ ನೀಡಿದರು.
ಮೈತ್ರಿ ಅಭ್ಯರ್ಥಿ ಎಚ್ಡಿಕೆ ಪರವಾಗಿ ಸುಮಲತಾ ಪ್ರಚಾರ ಸಂಬಂಧ ಕಳೆದ ಚುನಾವಣೆಯಲ್ಲಿ ದಾಯಾದಿಗಳಾಗಿದ್ದ ಅಕ್ಕ-ತಮ್ಮ ಈ ಚುನಾವಣೆಯಲ್ಲಿ ಒಂದಾಗಿದ್ದಾರೆ. ಅವರ ಬಗ್ಗೆ ನಾವು ಯಾಕೆ ಮಾತನಾಡೋದು. ಈಗ ತಮ್ಮನ ಪರ ಅಕ್ಕ ಇದ್ದಾರೆ. ಅವರ ಚುನಾವಣೆ ಅವರದು, ನಮ್ಮ ಚುನಾವಣೆ ನಮ್ಮದು ಎಂದು ವ್ಯಂಗ್ಯವಾಡಿದರು.
ಇನ್ನು ಅಂಬರೀಶಣ್ಣನ ಅಭಿಮಾನಿಗಳು ಕಾಂಗ್ರೆಸ್ ಪರ ಇದ್ದಾರೆ. ಅಂಬರೀಶ್ ಬದುಕಿರುವವರೆಗೂ ಕಾಂಗ್ರೆಸ್ ಪಕ್ಷದವರಾಗಿಯೇ ಇದ್ದರು. ಕಳೆದ ಚುನಾವಣೆಯಲ್ಲಿ ತಮ್ಮ, ಅಕ್ಕನಿಗೆ ಕೊಟ್ಟ ಕಾಟವನ್ನ ಅಂಬಿ ಅಭಿಮಾನಿಗಳು ಮರೆಯುತ್ತಾರಾ? ಅಂಬರೀಶ್ ಅಭಿಮಾನಿಗಳು ಕಾಂಗ್ರೆಸ್ ಪರ ಇದ್ದು, ಈ ಬಾರಿ ಸ್ಟಾರ್ ಚಂದ್ರು 2 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಗಣಿಗ ರವಿಕುಮಾರ್ ತಿಳಿಸಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…